ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ಭಾರತದ ಹಸಿರು ಹೊದಿಕೆ 15,000 ಚದರ ಕಿಲೋಮೀಟರ್ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸೋಮವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬಯಿಯ ಆರೆ ಕಾಲೋನಿಯಲ್ಲಿ ಮೆಟ್ರೋ ಯೋಜನೆಗಾಗಿ ಮರ ಕಡಿಯಲಾಗುತ್ತಿರುವ ಬಗೆಗಿನ ಪ್ರಶ್ನೆಗೆ ಉತ್ತರಿಸಿ, “ಈ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ನೀಡಿದೆ, ಆದ್ದರಿಂದ ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಮರವನ್ನು ಕಡಿದರೆ ಅದರ ಬದಲಾಗಿ ಐದು ಮರವನ್ನು ನೆಟ್ಟು ಪೋಷಣೆ ಮಾಡಬೇಕು ಎಂಬುದು ನಮ್ಮ ನೀತಿ ಮತ್ತು ಅಭ್ಯಾಸವಾಗಬೇಕು” ಎಂದರು.
“ಕಳೆದ ನಾಲ್ಕು ವರ್ಷಗಳಲ್ಲಿ ದೇಶದ ಹಸಿರು ಹೊದಿಕೆ 15,000 ಚದರ ಕಿಲೋಮೀಟರ್ ಹೆಚ್ಚಾಗಿದೆ. ವಿಶ್ವದ ಕೆಲವೇ ಕೆಲವು ದೇಶಗಳಲ್ಲಿ ಹಸಿರು ಹೊದಿಕೆ ಹೆಚ್ಚಾಗುತ್ತಿದೆ, ಅದರಲ್ಲಿ ಭಾರತವೂ ಒಂದು” ಎಂದಿದ್ದಾರೆ.
ಮುಂಬಯಿನ ಆರೆ ಕಾಲೋನಿಯಲ್ಲಿ ಮರಗಳನ್ನು ಕಡಿಯದಂತೆ ಸುಪ್ರೀಂಕೋರ್ಟ್ನ ವಿಶೇಷ ಪೀಠ ಇಂದು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆಯನ್ನು ನೀಡಿದೆ
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಅಶೋಕ್ ಭೂಷಣ್ ಅವರ ನ್ಯಾಯಪೀಠವು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ ಮತ್ತು ಅಕ್ಟೋಬರ್ 21 ರಂದು ಈ ವಿಷಯಕ್ಕೆ ಸಂಬಂಧಿಸಿದಂತೆ ಬಂದಿರುವ ಎಲ್ಲಾ ಅರ್ಜಿಗಳನ್ನು ಆಲಿಸುವುದಾಗಿ ತಿಳಿಸಿದ್ದಾರೆ.
ಮರಗಳನ್ನು ಕಡಿಯುವುದರ ವಿರುದ್ಧ ಕಾನೂನು ವಿದ್ಯಾರ್ಥಿಗಳ ಗುಂಪು ನ್ಯಾಯಾಲಯಕ್ಕೆ ಪತ್ರವನ್ನು ಬರೆದಿತ್ತು, ಇದರ ಆಧಾರದ ಮೇಲೆ ಸುಯೊ ಮೋಟೋ ಪಿಐಎಲ್ ಅನ್ನು ಪಡೆದು ಸುಪ್ರೀಂ ನಿರ್ದೇಶನ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.