ನವದೆಹಲಿ: ದೇಶದಾದ್ಯಂತ ವಿಜಯದಶಮಿಯ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಪವಿತ್ರ ದಿನದಂದು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿಗಳೂ ನಾಗರಿಕರಿಗೆ ಶುಭ ಕಾಮನೆಗಳನ್ನು ತಿಳಿಸಿದ್ದಾರೆ.
“ವಿಜಯದಶಮಿಯ ಪವಿತ್ರ ದಿನದ ಶುಭಾಶಯಗಳು”ಎಂದು ಟ್ವಿಟ್ ಮಾಡಿರುವ ಮೋದಿಯವರು, ಅದರ ಜೊತೆಗೆ ತಾವು ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದುದರ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
विजयादशमी के पावन पर्व पर आप सभी को हार्दिक शुभकामनाएं।
Greetings on the auspicious occasion of #VijayaDashami. pic.twitter.com/V0xjMuzUSL
— Narendra Modi (@narendramodi) October 8, 2019
ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ಶುಭಾಶಯಗಳನ್ನು ತಿಳಿಸಿದ್ದಾರೆ.
ಕೆಟ್ಟತನದ ವಿರುದ್ಧ ಒಳ್ಳೆಯತನದ ವಿಜಯ, ಅಸತ್ಯದ ವಿರುದ್ಧ ಸತ್ಯದ ವಿಜಯದ ಸಂಕೇತವಾಗಿ ವಿಜಯದಶಮಿಯನ್ನು ಆಚರಣೆ ಮಾಡಲಾಗುತ್ತದೆ.
ಈ ಹಬ್ಬವು ನಿರ್ಗತಿಕರಿಗೆ ಮತ್ತು ವಂಚಿತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲು ಜನರನ್ನು ಪ್ರೇರೇಪಿಸಲಿದೆ ಎಂದು ರಾಷ್ಟ್ರಪತಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. “ವಿಜಯದಶಮಿಯ ಶುಭ ಸಂದರ್ಭದಲ್ಲಿ, ನನ್ನ ದೇಶದ ನಾಗರಿಕರೆಲ್ಲರಿಗೂ ಶುಭಾಶಯಗಳನ್ನು ಅರ್ಪಿಸುತ್ತೇನೆ ಮತ್ತು ಅವರಿಗೆ ಯಶಸ್ಸು, ಸಮೃದ್ಧಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ಈ ಹಬ್ಬವು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು ಮತ್ತು ದೀನದಲಿತ ಬಗ್ಗೆ ಕಾಳಜಿಯನ್ನು ಹೊಂದಿರುವ ಸಮಾಜವನ್ನು ನಿರ್ಮಿಸಲು ನಮಗೆ ಪ್ರೇರಣೆ ನೀಡಲಿ” ಎಂದು ಟ್ವಿಟ್ ಮಾಡಿದ್ದಾರೆ.
ಹಬ್ಬವು ದುಷ್ಟತನದ ಮೇಲೆ ಒಳ್ಳೆಯತನದ ಗೆಲುವನ್ನು ಸಂಕೇತಿಸುತ್ತದೆ ಎಂದು ನಾಯ್ಡು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. “ನಾವು ನಿರಂತರವಾಗಿ ರಾಕ್ಷಸ ಶಕ್ತಿಗಳನ್ನು ದಮನಿಸಬೇಕು, ಒಳ್ಳೆಯತನ ಮತ್ತು ಸಾಮರಸ್ಯವನ್ನು ಬೆಳೆಸಿಕೊಳ್ಳಬೇಕು” ಎಂದು ಹೇಳಿದ್ದಾರೆ. ಈ ಹಬ್ಬವು ದೇಶ ಮತ್ತು ಜಗತ್ತಿಗೆ ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
वायु सेना दिवस पर, हम अपने वायु योद्धाओं, सेवानिवृत्त अधिकारियों और भारतीय वायु सैनिकों के परिवारों का सगर्व सम्मान करते हैं।
साहस और दृढ़ निश्चय के साथ हमारी हवाई सीमाओं को सुरक्षित रखने वाले हमारे बहादुर वायु सैनिकों का शौर्य भारत के लिए गौरव का विषय है — राष्ट्रपति कोविन्द
— President of India (@rashtrapatibhvn) October 8, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.