ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸರು ಬುಧವಾರ ನಸುಕಿನಜಾವ ಚಾರ್ಮಾಡಿ ಚೆಕ್ಪಾಯಿಂಟ್ ಬಳಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ. ಅಲ್ಲದೇ ಇದರಲ್ಲಿದ್ದ ನಾಲ್ವರನ್ನು ಬಂಧಿಸಿದ್ದಾರೆ.
ದುಷ್ಕರ್ಮಿಗಳು ಕಡೂರುನಿಂದ ಕಾಸರಗೋಡು ಕಡೆಗೆ ಎರಡು ಟೆಂಪೊಗಳಲ್ಲಿ ಅಕ್ರಮವಾಗಿ ಗೋವನ್ನು ಸಾಗಿಸಲಾಗುತ್ತಿದ್ದರು. ಇದನ್ನರಿತ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ವಾಹನಗಳಿದ್ದ ಒಟ್ಟು ೨೧ ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಚಾರ್ಮಾಡಿ ಚೆಕ್ಪಾಯಿಂಟ್ ಬಳಿ ಗಸ್ತು ತಿರುಗುತ್ತಿದ್ದ ಪೋಲೀಸರು ಈ ವೇಳೆ ಮೂಡಿಗೆರೆ ಕಡೆಯಿಂದ ಬಂದ ಟೆಂಪೋಗಳನ್ನು ನಿಲ್ಲಿಸುವಂತೆ ಸೂಚಿಸಿದರು. ವಾಹನಗಳನ್ನು ನಿಲ್ಲಿಸಿ ಅದರಲ್ಲಿದ್ದವರು ಪರಾಗಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿಲ್ಲ.
ಮೂಲಗಳ ಪ್ರಕಾರ ಟೆಂಪೋಗಳಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು, ಇವುಗಳನ್ನು ಮಾಂಸಕ್ಕಾಗಿ ಕಡಿಯಲು ಕೊಂಡೊಯ್ಯತಿದ್ದರು ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.