ನವದೆಹಲಿ: 2019ರ ನೋಬೆಲ್ ಎಕನಾಮಿಕ್ಸ್ ಪುರಸ್ಕಾರಕ್ಕೆ ಭಾರತೀಯ ಸಂಜಾತ, ಅಮೆರಿಕನ್ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಭಾಜನರಾಗಿದ್ದಾರೆ. ಜಾಗತಿಕ ಬಡತನ ನಿರ್ಮೂಲನೆಗಾಗಿ ನಡೆಸಿದ ಪ್ರಯೋಗಾತ್ಮಕ ಪರಿಹಾರ ಅಧ್ಯಯನಕ್ಕಾಗಿ ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮರ್ ಅವರೊಂದಿಗೆ ನೋಬೆಲ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಕೋಲ್ಕತ್ತಾದಲ್ಲಿ ಜನಿಸಿದ ಅಭಿಜಿತ್ ಅವರು, ಕೋಲ್ಕತ್ತಾದ ಸೌತ್ ಪಾಯಿಂಟ್ ಶಾಲೆ ಮತ್ತು ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದರು, ಅಲ್ಲಿ ಅವರು 1981 ರಲ್ಲಿ ಅರ್ಥಶಾಸ್ತ್ರದಲ್ಲಿ ಪದವಿ ಪಡೆದರು. ನಂತರ, 1983 ರಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಎಂ.ಎ. ಮುಗಿಸಿದರು. ನಂತರ, ಅವರು ಪಿಎಚ್ಡಿ ಪದವಿ ಪಡೆದರು. 1988 ರಲ್ಲಿ ಹಾರ್ವರ್ಡ್ನಲ್ಲಿ ಅರ್ಥಶಾಸ್ತ್ರದಲ್ಲಿ ಪಿಎಚ್ ಡಿ ಪಡೆದರು. ಅವರ ಡಾಕ್ಟರೇಟ್ ಪ್ರಬಂಧದ ವಿಷಯವೆಂದರೆ “ಎಸ್ಸೇಸ್ ಇನ್ ಇನ್ಫರ್ಮೇಷನ್ ಎಕನಾಮಿಕ್ಸ್”.
ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ಪ್ರಿನ್ಸ್ಟನ್ ವಿಶ್ವವಿದ್ಯಾಲಯದಲ್ಲಿ ಬೋಧಿಸಿದ ಅನುಭವ ಅವರಿಗಿದೆ. ಪ್ರಸ್ತುತ ಅವರು ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಫೋರ್ಡ್ ಫೌಂಡೇಶನ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ ಪ್ರೊಫೆಸರ್ ಆಗಿದ್ದಾರೆ.
ಇದೀಗ ಅರ್ಥಶಾಸ್ತ್ರ ವಿಭಾಗದಲ್ಲಿ ಮಾಡಿದ ಅತ್ಯುನ್ನತ ಸಾಧನೆಗಾಗಿ ಅವರಿಗೆ ನೋಬೆಲ್ ಪ್ರಶಸ್ತಿ ಒಲಿದು ಬಂದಿದೆ.
BREAKING NEWS:
The 2019 Sveriges Riksbank Prize in Economic Sciences in Memory of Alfred Nobel has been awarded to Abhijit Banerjee, Esther Duflo and Michael Kremer “for their experimental approach to alleviating global poverty.”#NobelPrize pic.twitter.com/SuJfPoRe2N— The Nobel Prize (@NobelPrize) October 14, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.