ನವದೆಹಲಿ: ಮಹಾರಾಷ್ಟ್ರದ ಮುಂಬರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಮಂಗಳವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮುಂಬಯಿನ ರಂಗ್ಶಾಡಾ ಸಭಾಂಗಣದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ತನ್ನ ಚುನಾವಣಾ ಪ್ರಣಾಳಿಕೆಯನ್ನು ‘ಸಂಕಲ್ಪ ಪತ್ರ’ ಎಂದು ಬಣ್ಣಿಸಿದ ಬಿಜೆಪಿ, ಜ್ಯೋತಿಬಾ ಫುಲೆ ಮತ್ತು ಅವರ ಪತ್ನಿ ಸಾವಿತ್ರಿಬಾಯಿ ಫುಲೆ ಮತ್ತು ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಬೇಡಿಕೆಯನ್ನು ಇಟ್ಟಿದೆ.
“ಬಡವರು, ಗ್ರಾಮಗಳು, ರೈತರು, ಬುಡಕಟ್ಟು ಜನಾಂಗದವರು ಮತ್ತು ಇತರ ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ನಾವು ಬದ್ಧರಾಗಿದ್ದೇವೆ” ಎಂದು ನಡ್ಡಾ ಈ ವೇಳೆ ಹೇಳಿದ್ದಾರೆ.
44 ಪುಟಗಳ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗವನ್ನು ಒದಗಿಸುವುದಾಗಿ ಮತ್ತು ಮಹಾರಾಷ್ಟ್ರವನ್ನು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡಿದೆ. ಮೂಲಸೌಕರ್ಯದಲ್ಲಿ ಐದು ಕೋಟಿ ಹೂಡಿಕೆ ಮಾಡುವುದಾಗಿ, ರಾಜ್ಯದ ರೈತರಿಗೆ ಪ್ರತಿದಿನ 12 ಗಂಟೆಗಳ ವಿದ್ಯುತ್ ಒದಗಿಸುವುದಾಗಿ ಮತ್ತು ಮುಂದಿನ ಐದು ವರ್ಷಗಳಲ್ಲಿ ಮಹಾರಾಷ್ಟ್ರವನ್ನು ಬರ ಮುಕ್ತವನ್ನಾಗಿಸುವುದಾಗಿ ಭರವಸೆ ನೀಡಿದೆ. 2022 ವೇಳೆಗೆ ರಾಜ್ಯದ ಎಲ್ಲಾ ಮನೆಗಳಿಗೆ ಶುದ್ಧ ಕುಡಿಯುವ ನೀರು ಸಿಗುತ್ತದೆ ಎಂದೂ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಅಕ್ಟೋಬರ್ 12 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮತದಾರರನ್ನು ಸೆಳೆಯುವ ಭರವಸೆಯೊಂದಿಗೆ ರಾಜ್ಯದಾದ್ಯಂತ 1000 ‘ಭೋಜನಾಲಯ’ ಸ್ಥಾಪಿಸುವುದು ಸೇರಿದಂತೆ ಗುಣಮಟ್ಟದ ಮತ್ತು ಪೌಷ್ಠಿಕ ಆಹಾರವನ್ನು 10 ರೂಪಾಯಿಗೆ ಪೂರೈಸುವ ಭರವಸೆಯನ್ನು ನೀಡಿದೆ.
ಕಾಂಗ್ರೆಸ್ ಮತ್ತು ಎನ್ ಸಿ ಪಿ ಮೈತ್ರಿ ಅಕ್ಟೋಬರ್ 17ರಂದು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ.
ಅಕ್ಟೋಬರ್ 21ರಂದು ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಜರುಗಲಿದೆ. ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ.
ಮಹಾರಾಷ್ಟ್ರದಲ್ಲಿ ಒಟ್ಟು 288 ವಿಧಾನಸಭಾ ಸ್ಥಾನಗಳಿದ್ದು, ಬಹುಮತ ಪಡೆಯಲು ಒಂದು ಪಕ್ಷ 145 ಸ್ಥಾನಗಳನ್ನು ಗೆಲ್ಲಬೇಕಾಗಿದೆ.
LIVE: BJP National Working President Shri @JPNadda along with CM @Dev_Fadnavis releases ‘Sankalp Patra – 2019’ for Maharashtra Assembly election in Mumbai. #BJPMahaSankalpPatra https://t.co/oha6wSDGPo
— BJP (@BJP4India) October 15, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.