ಶಿವಮೊಗ್ಗ: ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಜಿಲ್ಲಾಡಳಿತ ಶಿವಮೊಗ್ಗ ನಗರದ ಸರ್ಕಾರಿ ಸಾರಿಗೆ ಬಸ್ ನಿಲ್ದಾಣದಲ್ಲಿ 3 ದಿನಗಳ ಫೋಟೋ ಪ್ರದರ್ಶನವನ್ನು ಆಯೋಜಿಸಿದೆ. ಸೋಮವಾರದಿಂದ ಪ್ರದರ್ಶನ ಆರಂಭಗೊಂಡಿದ್ದು, ಒಟ್ಟು ಮೂರು ದಿನಗಳ ಕಾಲ ಜರುಗಲಿದೆ.
ಗಾಂಧೀಜಿ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಅತ್ಯಂತ ಅಪರೂಪದ ಚಿತ್ರ ಪ್ರದರ್ಶನ ಇದಾಗಿದೆ. ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಗಾಂಧೀಜಿಯವರು ಕರ್ನಾಟಕಕ್ಕೆ ಭೇಟಿಕೊಟ್ಟ ಸ್ಥಳಗಳು, ದೇಶದಾದ್ಯಂತ ನಡೆಸಿದ ಸಭೆ ಸಮಾರಂಭಗಳು, ವಿದೇಶದಲ್ಲಿ ಅವರು ಕಳೆದ ದಿನಗಳ ಹೀಗೆ ಹತ್ತು ಹಲು ವಿಷಯಗಳ ಮೇಲೆ ಚಿತ್ರ ಪ್ರದರ್ಶನ ಬೆಳಕು ಚೆಲ್ಲುತ್ತದೆ.
ವಾರ್ತಾ ಇಲಾಖೆಯು ಬೇರೆ ಬೇರೆ ಮೂಲಗಳಿಂದ ಸಂಗ್ರಹಿಸಿದ ಗಾಂಧೀಜಿಯವರ ಅಪರೂಪದ ಚಿತ್ರಗಳನ್ನು ಇಲ್ಲಿ ಪ್ರದರ್ಶಿಸಲಾಗಿದೆ.
ಬಸ್ ನಿಲ್ದಾಣಕ್ಕೆ ಆಗಮಿಸುವ ಅನೇಕ ಮಂದಿ ಚಿತ್ರ ಪ್ರದರ್ಶವನ್ನು ಕಣ್ತುಂಬಿಕೊಂಡು, ಗಾಂಧೀಜಿ ಜೀವನದ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೇ, ಅನೇಕ ಮಂದಿ ಚಿತ್ರ ಪ್ರದರ್ಶನ ನೋಡಲೆಂದೇ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.