News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಿ.ಕೆ.ರವಿ ಸಾವು: ಒಕ್ಕಲಿಗರ ಸಂಘದಿಂದ ಪಾದಯಾತ್ರೆ

raviಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ರಾಜ್ಯ ಒಕ್ಕಲಿಗರ ಸಂಘದಿಂದ ಬೃಹತ್ ಪಾದಯಾತ್ರೆ ಕೈಗೊಳ್ಳಲಾಗಿದೆ.

ಕಿಮ್ಸ್ ಆಸ್ಪತ್ರೆಯ ಬಳಿ ಇರುವ ಒಕ್ಕಲಿಗರ ಸಂಘದ ಕಛೇರಿಯಿಂದ ಫ್ರೀಡಂಪಾರ್ಕ್‌ವರೆಗೆ ಲಕ್ಷಾಂತರ ಒಕ್ಕಲಿಗರು ಪಾದಯಾತ್ರೆ ಕೈಗೊಳ್ಳಲಿದ್ದಾರೆ. ಪಾದಯಾತ್ರೆಯ ನೇತೃತ್ವವನ್ನು ಅಪ್ಪಾಜಿ ಗೌಡ ವಹಿಸಿದ್ದು ಜೆಡಿಎಸ್ ಮುಖಂಡ ಕುಮಾರಸ್ವಾಮಿಯವರೂ ಭಾಗವಹಿಸಲಿದ್ದಾರೆ.

ಇನ್ನೊಂದೆಡೆ ರವಿ ಸಾವಿನಿಂದಾಗಿ ಅವರ ಕುಟುಂಬ ತತ್ತರಗೊಂಡಿದೆ. ಮಗನ ಸಾವಿಗೆ ಮನನೊಂದು ನಾಲ್ಕು ದಿನಗಳಿಂದ ಅನ್ನ ಆಹಾರ ತ್ಯಜಿಸಿದ್ದ ಅವರ ತಾಯಿ ಗೌರಮ್ಮ ಅಸ್ವಸ್ಥಗೊಂಡು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಸ್ತುತ ಅವನ್ನು ಹುಲಿಯೂರು ದುರ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗನ ಸಾವು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅವರು ವಿಧಾನಸೌಧದಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಧರಿಣಿಯನ್ನೂ ನಡೆಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top