ಅಹ್ಮದಾಬಾದ್: ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಅಲ್ಲದೇ, ಪುಲ್ವಾಮಾ ದಾಳಿಯ ನಂತರ ಭಯೋತ್ಪಾದಕರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡುವ ದಿಟ್ಟ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡರು ಎಂದಿದ್ದಾರೆ.
“ಕಾಂಗ್ರೆಸ್ ಅವಧಿಯಲ್ಲಿ, ಮೌನಿ ಬಾಬಾ (ಮನಮೋಹನ್ ಸಿಂಗ್) ನಮ್ಮ ಪ್ರಧಾನ ಮಂತ್ರಿಯಾಗಿದ್ದರು. ಆ ಸಮಯದಲ್ಲಿ ಭಯೋತ್ಪಾದಕರು ನಮ್ಮ ದೇಶದೊಳಗೆ ನುಗ್ಗಿ ನಮ್ಮ ಸೈನಿಕರನ್ನು ಹತ್ಯೆ ಮಾಡುತ್ತಿದ್ದರು. ಪುಲ್ವಾಮಾ ದಾಳಿ ನಡೆದ 10 ದಿನಗಳೊಳಗೆ ನರೇಂದ್ರ ಮೋದಿ ಪಾಕಿಸ್ಥಾನ ಮೂಲದ ಭಯೋತ್ಪಾದಕರ ಮೇಲೆ ದಾಳಿ ನಡೆಸುವ ಮೂಲಕ ದಿಟ್ಟ ಕ್ರಮ ಕೈಗೊಂಡರು. ದೇಶವು ಸುರಕ್ಷಿತವಾಗಿದೆ ಎಂದು ಖಚಿತಪಡಿಸಿದರು “ಎಂದು ಶಾ ಅವರು ಇಂದು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಹಲವಾರು ‘ಸಕಾರಾತ್ಮಕ’ ಬದಲಾವಣೆಗಳನ್ನು ಎತ್ತಿ ತೋರಿಸಿದ ಶಾ, ಬಿಜೆಪಿ ನೇತೃತ್ವದ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯ ಹೆಬ್ಬಾಗಿಲನ್ನು ತೆರೆಯಿತು ಎಂದಿದ್ದಾರೆ.
“ನಾವು ದೇಶದ ಅನೇಕ ಭಾಗಗಳಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತಂದಿದ್ದೇವೆ. ನಾವು 370 ಮತ್ತು 35 ಎನೇ ವಿಧಿಯನ್ನು ರದ್ದುಗೊಳಿಸಿ ಕಾಶ್ಮೀರವನ್ನು ಭಾರತದ ಭಾಗವನ್ನಾಗಿ ಮಾಡಿದ್ದೇವೆ. ಕಾಶ್ಮೀರದ ಅಭಿವೃದ್ಧಿಯ ಬಾಗಿಲುಗಳು ಈಗ ತೆರೆದಿವೆ” ಎಂದು ಅವರು ಹೇಳಿದ್ದಾರೆ.
“ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರು ಈ ವಿಧಿ ರದ್ದುಗೊಳಿಸುವುದರಿಂದ ಕಾಶ್ಮೀರದಲ್ಲಿ ರಕ್ತ ಹರಿಯುತ್ತದೆ ಎಂದಿದ್ದರು, ಆದರೆ ಏನೂ ಆಗಲಿಲ್ಲ. ಇದುವರೆಗೆ ಒಂದೇ ಒಂದು ಗುಂಡು ಹಾರಿಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.