ನವದೆಹಲಿ: ಇಂದು ಭಾರತೀಯ ಸೇನೆಯು ಇನ್ಫಾಂಟ್ರಿ ಡೇ ಅನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ನವದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಮಾಲಾರ್ಪಣೆಯನ್ನು ಮಾಡಿದರು.
ಸ್ವತಂತ್ರ ಭಾರತದಲ್ಲಿ ನಡೆದ ಮೊತ್ತಮೊದಲ ಮಿಲಿಟರಿ ಕಾರ್ಯಾಚರಣೆಯ ಸ್ಮರಣಾರ್ಥವಾಗಿ ಪ್ರತಿವರ್ಷ ಅಕ್ಟೋಬರ್ 27 ಅನ್ನು ಇನ್ಫಾಂಟ್ರಿ ಡೇಯನ್ನಾಗಿ ಆಚರಣೆ ಮಾಡಲಾಗುತ್ತದೆ.
ಕಾಶ್ಮೀರ ಕಣಿವೆಯಲ್ಲಿ 1947ರ ಅಕ್ಟೋಬರ್ 27 ರಂದು ಭಾರತೀಯ ಸೇನೆಯು ಸ್ವತಂತ್ರ ಭಾರತದಲ್ಲಿ ನಡೆದ ಮೊತ್ತಮೊದಲ ದಾಳಿಯ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಸಿಖ್ ರೆಜಿಮೆಂಟ್ನ ಮೊದಲ ಬೆಟಾಲಿಯನ್ ವಿಜಯವನ್ನು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
ಇದರ ಸ್ಮರಣಾರ್ಥ ಭಾರತದಲ್ಲಿ ಪ್ರತಿವರ್ಷ ಇನ್ಫಾಂಟ್ರಿ ಡೇ ಅನ್ನು ಆಚರಣೆ ಮಾಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.