ಶ್ರೀನಗರ: ಯುರೋಪಿಯನ್ ಯೂನಿಯನ್ ಸಂಸತ್ ಸದಸ್ಯರುಗಳ ನಿಯೋಗ ಮಂಗಳವಾರ ಬೆಳಗ್ಗೆ ಕಾಶ್ಮೀರ ಕಣಿವೆಗೆ ತೆರಳಿದೆ. ಈ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿತ್ತು.
ಮೂಲಗಳ ಪ್ರಕಾರ ಯುರೋಪಿಯನ್ ಯೂನಿಯನ್ ನಿಯೋಗವು ಜಮ್ಮು-ಕಾಶ್ಮೀರದ ಆಡಳಿತದ ಅಧಿಕಾರಿಗಳನ್ನು ಭೇಟಿಯಾಗುವ ಸಾಧ್ಯತೆ ಇದೆ.
ಜಮ್ಮು-ಕಾಶ್ಮೀರದ ರಾಜ್ಯಪಾಲರ ಜೊತೆ ಮಾತುಕತೆಯನ್ನು ನಡೆಸಲಿದೆ. ಅಲ್ಲದೇ ಕಣಿವೆ ರಾಜ್ಯದ ಸ್ಥಳೀಯ ಜನರನ್ನು ಭೇಟಿಯಾಗಿ ಮಾತುಕತೆಯನ್ನು ನಡೆಸಲಿದೆ.
ನಿಯೋಗವನ್ನು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು, ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಲಿರುವ ಈ ನಿಯೋಗದ ಭೇಟಿ ಫಲಪ್ರದವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಪೋಲ್ಯಾಂಡ್, ಇಟಲಿ, ಫ್ರಾನ್ಸ್, ಜರ್ಮನಿ, ಬೆಲ್ಜಿಯಂ, ಯುಕೆ, ಸ್ಲೋವಕಿಯ ಮುಂತಾದ ದೇಶಗಳ ಸದಸ್ಯರನ್ನು ಈ ನಿಯೋಗವು ಒಳಗೊಂಡಿದೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಕೂಡ ನಿಯೋಗದೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.