ನವದೆಹಲಿ: ಕಪ್ಪುಹಣವನ್ನು ನಿರ್ಮೂಲನೆಗೊಳಿಸುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಬಂಗಾರಕ್ಕೆ ಸಂಬಂಧಿಸಿದಂತೆ ಕಠಿಣ ಯೋಜನೆ ತರಲು ಮುಂದಾಗಿದೆ. ಈ ಯೋಜನೆಯನ್ನು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ಅನುಮೋದಿಸಲಿದೆ.
ಒಂದು ವೇಳೆ ಈ ಯೋಜನೆ ಅನುಷ್ಠಾನಗೊಂಡರೆ, 2016ರ ಅಪನಗದೀಕರಣದ ಬಳಿಕ ಕಪ್ಪುಹಣ ನಿರ್ಮೂಲನೆಗೆ ತೆಗೆದುಕೊಂಡ ಮತ್ತೊಂದು ಮಹತ್ವದ ನಿರ್ಧಾರ ಇದಾಗಲಿದೆ. ಶೀಘ್ರದಲ್ಲೇ ಈ ಯೋಜನೆಗೆ ಕೇಂದ್ರ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಯೋಜನೆಯಡಿಯಲ್ಲಿ, ದಾಖಲೆ ಇಲ್ಲದೆ ಇರುವ ಬಂಗಾರದ ಮಾಹಿತಿಯನ್ನು ಸರ್ಕಾರಕ್ಕೆ ನೀಡಬೇಕಾಗುತ್ತದೆ ಮತ್ತು ಸರ್ಕಾರ ನಿಗದಿಪಡಿಸಿದ ತೆರಿಗೆಯನ್ನು ಇದಕ್ಕೆ ಪಾವತಿಸಬೇಕಾಗುತ್ತದೆ.
ಆದಾಯ ತೆರಿಗೆಗೆ ಇರುವ ಅಮ್ನೆಸ್ಟಿ ಯೋಜನೆಯಂತೆ, ಬಂಗಾರಕ್ಕೂ ಅಮ್ನೆಸ್ಟಿ ಯೋಜನೆಯನ್ನು ತರಲು ನಿರ್ಧರಿಸಲಾಗಿದೆ. ನಿರ್ದಿಷ್ಟ ಸಮಯಾವಕಾಶವನ್ನು ನೀಡಿ, ಬಂಗಾರದ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೋರಲಾಗುತ್ತದೆ. ಮಾಹಿತಿ ನೀಡಲು ವಿಫಲರಾದರೆ ದಂಡವನ್ನು ವಿಧಿಸಲಾಗುತ್ತದೆ. ದೇಗುಲ ಮತ್ತು ಟ್ರಸ್ಟ್ಗಳಲ್ಲಿರುವ ಅಪಾರ ಪ್ರಮಾಣದ ಬಂಗಾರವನ್ನೂ ಉತ್ಪಾದಕ ಹೂಡಿಕೆಯಾಗಿ ಘೋಷಣೆ ಮಾಡಲಾಗಿದೆ.
ಚಿನ್ನದ ಕ್ಷಮಾದಾನ ಯೋಜನೆಯ ಪ್ರಸ್ತಾವನೆಯನ್ನು ಆರ್ಥಿಕ ವ್ಯವಹಾರಗಳ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಸಿದ್ಧಪಡಿಸಿವೆ ಎಂದು ವರದಿಯಾಗಿದೆ. ಹಣಕಾಸು ಸಚಿವಾಲಯವು ಈಗಾಗಲೇ ತನ್ನ ಪ್ರಸ್ತಾವನೆಯನ್ನು ಸಂಪುಟಕ್ಕೆ ಕಳುಹಿಸಿದೆ ಮತ್ತು ಅಕ್ಟೋಬರ್ ಎರಡನೇ ವಾರದಲ್ಲಿ ಸಂಪುಟ ಈ ಪ್ರಸ್ತಾಪದ ಕುರಿತು ಚರ್ಚೆ ನಡೆಸಲು ನಿರ್ಧರಿಸಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಈ ನಿರ್ಧಾರ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.