ಮುಂಬಯಿ: ಮುಂಬಯಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಅವರ ಹೆಸರನ್ನು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಪ್ರಸ್ತಾಪಿಸಿದರು ಮತ್ತು ಈ ಪ್ರಸ್ತಾಪವನ್ನು ಸುಧೀರ್ ಮುಂಗಂತಿವಾರ್, ಹರಿಭೌ ಬಾಗಡೆ ಮತ್ತು ಸಂಜಯ್ ಕುಟೆ ಅವರು ಅನುಮೋದಿಸಿದರು.
ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಪಕ್ಷದ ಉಪಾಧ್ಯಕ್ಷ ಅವಿನಾಶ್ ರೈ ಖನ್ನಾ ಕೂಡ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ವೀಕ್ಷಕರಾಗಿ ಭಾಗವಹಿಸಿದ್ದರು.
ವಿಧಾನಸಭೆ ಚುನಾವಣೆ 2019ರ ಫಲಿತಾಂಶಗಳನ್ನು ಘೋಷಿಸಿದಾಗಿನಿಂದಲೂ, ಬಿಜೆಪಿಯ ಮಿತ್ರ ಶಿವಸೇನೆ ತನಗೆ ಮುಖ್ಯಮಂತ್ರಿ ಹುದ್ದೆ ಸಿಗಬೇಕು ಎಂಬ ಪಟ್ಟು ಹಿಡಿದು ಕುಳಿತಿದೆ. ಹೀಗಾಗಿ ಅಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿದೆ.
“ಐದು ವರ್ಷಗಳ ಕಾಲ ಸ್ಥಿರ ಮತ್ತು ಪರಿಣಾಮಕಾರಿ ಮೈತ್ರಿ ಸರ್ಕಾರವನ್ನು ಬಿಜೆಪಿ ಮುನ್ನಡೆಸಲಿದೆ. ಇದು ಬಿಜೆಪಿ ನೇತೃತ್ವದ ಸರ್ಕಾರವಾಗಲಿದೆ ಎಂದು ನಾನು ಭರವಸೆ ನೀಡುತ್ತೇನೆ. ಶಿವಸೇನೆಗೆ ಸಿಎಂ ಹುದ್ದೆ ನೀಡುವ ಬಗ್ಗೆ ಏನೂ ತೀರ್ಮಾನವಾಗಿಲ್ಲ ಎಂದು ನಮ್ಮ ಪಕ್ಷದ ಅಧ್ಯಕ್ಷರು ಖಚಿತಪಡಿಸಿದ್ದಾರೆ. ಮೈತ್ರಿ ಸೂತ್ರವನ್ನು ಇನ್ನೂ ನಿರ್ಧರಿಸಲಾಗಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.