ನವದೆಹಲಿ: 2008ರಲ್ಲಿ ಜಮ್ಮು ಮತ್ತು ಕಾಶ್ಮೀರದ ಎಲ್ಒಸಿ ಬಳಿ ನಡೆದ ನೆಲ ಬಾಂಬ್ ಸ್ಫೋಟದಲ್ಲಿ ಎಡಗಾಲು ಕಳೆದುಕೊಂಡ ಭಾರತೀಯ ಯೋಧರೊಬ್ಬರು ಇತ್ತೀಚಿಗೆ ಚೀನಾದಲ್ಲಿ ನಡೆದ ಮಿಲಿಟರಿ ವಿಶ್ವ ಕ್ರೀಡಾಕೂಟದಲ್ಲಿ ಮೂರು ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ.
ಮಿಲಿಟರಿ ವಿಶ್ವ ಕ್ರೀಡಾಕೂಟದ ಏಳನೇ ಆವೃತ್ತಿಯು ಭಾನುವಾರ ಚೀನಾದಲ್ಲಿ ವುವಾಹ್ನಲ್ಲಿ ಸಮಾಪಣಗೊಂಡಿತು. ಇದರಲ್ಲಿ ಪ್ಯಾರಾ-ಅಥ್ಲೀಟ್ಗಳಿಗಾಗಿನ 100 ಮೀ, 200 ಮೀ ಮತ್ತು 400 ಮೀ ಸ್ಪ್ರಿಂಟ್ ಸ್ಪರ್ಧೆಗಳಲ್ಲಿ ಭಾಗವಹಿಸಿದ ಯೋಧ ಆನಂದನ್ ಗುಣಶೇಖರನ್ (32) ಭಾರತಕ್ಕೆ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ.
ವುಹಾನ್ನಿಂದ ಹಿಂದಿರುಗಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗುಣಶೇಖರನ್ ಅವರು, 2020 ರಲ್ಲಿ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಸ್ಪರ್ಧಿಸುವುದು ನನ್ನ ಮುಂದಿನ ಗುರಿ ಎಂದು ಹೇಳಿದ್ದಾರೆ.
“ಟೋಕಿಯೋ ಪ್ಯಾರಾಲಿಂಪಿಕ್ಸ್ನ 200 ಮೀಟರ್ ಓಟಕ್ಕಾಗಿ ನನ್ನ ಆಯ್ಕೆಯ ಅಂತಿಮ ಪ್ರಯೋಗ ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯಲಿದೆ. ಟೋಕಿಯೊ ಕ್ರೀಡಾಕೂಟಕ್ಕೆ ಆಯ್ಕೆಯಾಗುವುದು ಈಗ ನನ್ನ ಮುಂದೆ ಉಳಿದಿರುವ ಗುರಿ” ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಆಗಸ್ಟ್ನಲ್ಲಿ ಪ್ಯಾರಿಸ್ನಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್ನಲ್ಲಿ ಗುಣಶೇಖರನ್ 200 ಮೀ ಓಟದಲ್ಲಿ ಬಂಗಾರ ಗೆದ್ದಿದ್ದಾರೆ. 2015 ರ ಅಕ್ಟೋಬರ್ನಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆದ ಮಿಲಿಟರಿ ವಿಶ್ವ ಕ್ರೀಡಾಕೂಟದಲ್ಲಿ ಗುಣಶೇಖರನ್ ಅವರು 200 ಮೀ ಓಟದಲ್ಲಿ ಬಂಗಾರ ಜಯಿಸಿದ್ದಾರೆ ಮತ್ತು 100 ಮೀಟರ್ನಲ್ಲಿ ಬೆಳ್ಳಿ ಗೆದ್ದ ಗೆದ್ದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.