
ನವದೆಹಲಿ: ಭಾರತೀಯರ ಹಿತಾಸಕ್ತಿಯನ್ನು ರಕ್ಷಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕತೆ (Regional Comprehensive Economic Partnership) ಒಪ್ಪಂದಕ್ಕೆ ಒಳಪಡದಿರಲು ನಿರ್ಧರಿಸಿದ್ದಾರೆ. ಇದರಿಂದ ದೇಶದ ಸಣ್ಣ ಉದ್ಯಮಿಗಳಿಗೆ, ರೈತರಿಗೆ, ಡೈರಿ, ದತ್ತಾಂಶ ಭದ್ರತೆ ಮತ್ತು ಉತ್ಪಾದನಾ ವಲಯಕ್ಕೆ ಸಾಕಷ್ಟು ಪ್ರಯೋಜನವಾಗಲಿದೆ.
ಭಾರತವನ್ನು ಬಿಟ್ಟು ಉಳಿದ ಎಲ್ಲಾ 15 ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಿದೆ. 2020ರಲ್ಲಿ ವಿಯೆಟ್ನಾಂನಲ್ಲಿ ನಡೆಯಲಿರುವ RCEP ಸಭೆಯಲ್ಲಿ ಈ ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಲಿವೆ.
ಈ ಒಪ್ಪಂದವು ಭಾರತದ ತಯಾರಿಕ ವಲಯ, ಹೈನುಗಾರಿಕೆಗೆ ಧಕ್ಕೆ ತರಲಿದೆ ಎಂಬ ಆತಂಕವನ್ನು CEP ಒಪ್ಪಂದ ಸೃಷ್ಟಿಸಿತ್ತು. ಈ ಹಿನ್ನಲೆಯಲ್ಲಿ ಮೋದಿ ಒಪ್ಪಂದಕ್ಕೆ ಒಳಪಡದಿರುವ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಈ ಒಪ್ಪಂದವು ಸದಸ್ಯ ರಾಷ್ಟ್ರಗಳ ನಡುವೆ ಸುಂಕ ರಹಿತ ವ್ಯಾಪಾರಕ್ಕೆ ಅನುವು ಮಾಡಿಕೊಡುತ್ತದೆ. ಹೀಗಾಗಿ ಆರ್ಥಿಕ ಅಸ್ಥಿರತೆಯನ್ನು ಸೃಷ್ಟಿಸುತ್ತದೆ. ಹೀಗಾಗಿ ಕೆಲವು ವಸ್ತುಗಳ ಮೇಲೆ ಸುಂಕ ವಿಧಿಸಲು ಅನುವು ಮಾಡಿಕೊಡಬೇಕು ಎಂದು ಭಾರತ ಒತ್ತಾಯಿಸಿತ್ತು. ಆದರೆ ಇದಕ್ಕೆ ಉಳಿದ ರಾಷ್ಟ್ರಗಳು ಸಹಮತವನ್ನು ಸೂಚಿಸಲಿಲ್ಲ. ಹೀಗಾಗಿ ಭಾರತ ಒಪ್ಪಂದದಿಂದ ಹೊರ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ” RCEP ಒಪ್ಪಂದವನ್ನು ಸಮಸ್ತ ಭಾರತೀಯರ ಹಿತಾಸಕ್ತಿಯೊಂದಿಗೆ ತುಲನೆ ಮಾಡಿದಾಗ ನನಗೆ ಯಾವ ಸಕಾರಾತ್ಮಕ ಉತ್ತರಗಳೂ ಸಿಗಲಿಲ್ಲ. ಹೀಗಾಗಿ ಗಾಂಧೀಜಿಯ ಸ್ಫೂರ್ತಿಯಾಗಲಿ, ನನ್ನ ಅಂತಃಕರಣವಾಗಲಿ RCEPಗೆ ಸೇರ್ಪಡೆಗೊಳ್ಳಲು ಒಪ್ಪಿಗೆ ನೀಡಲಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


