ಬೆಂಗಳೂರು: ಸುದೀರ್ಘ ಸಮಯದ ಬೆಂಗಳೂರಿಗರ ಕನಸು ನನಸಾಗುತ್ತಿದೆ. ಶೀಘ್ರದಲ್ಲೇ ಸಬ್ ಅರ್ಬನ್ ರೈಲು ಉದ್ಯಾನಗರಿಗೆ ಕಾಲಿಡಲಿದೆ. ಇದರಿಂದ ಅಲ್ಲಿನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಮತ್ತು ಜನಜೀವನ ಸುಲಲಿತಗೊಳ್ಳಲಿದೆ.
ಬೆಂಗಳೂರಿಗೆ ಅಬ್ ಅರ್ಬನ್ ರೈಲು ಯೋಜನೆಯನ್ನು ವಿಸ್ತರಿಸಲು ಕೇಂದ್ರ ರೈಲ್ವೇ ಮಂಡಳಿಯು ಅನುಮೋದನೆಯನ್ನು ನೀಡಿದೆ.
2018ರ ಬಜೆಟ್ನಲ್ಲಿ ಸಿಲಿಕಾನ್ ಸಿಟಿಗೆ ಸಬ್ ಅರ್ಬನ್ ರೈಲು ಸೇವೆ ಒದಗಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಅಂದಿನ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಅದರಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಘೋಷಣೆ ಮಾಡಿದ್ದರು.
ಇದೀಗ ಸಬ್ ಅರ್ಬನ್ ರೈಲಿಗೆ ಅನುಮೋದನೆ ಸಿಕ್ಕಿತ್ತು, ಶೀಘ್ರದಲ್ಲೇ ರೈಲು ಬೆಂಗಳೂರು ನಡುವೆ ಸಂಚರಿಸಲಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ ಅವರು, “ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯನ್ನು ತ್ವರಿತಗೊಳಿಸಲು ರೈಲ್ವೇ ಮಂಡಳಿಯು ಸಭೆ ಸೇರಿದೆ ಮತ್ತು ಯೋಜನೆಗೆ ಅನುಮೋದನೆಯನ್ನು ನೀಡಿದೆ. ಆದಷ್ಟು ಬೇಗ ಈ ಯೋಜನೆಯ ಫಲ ಬೆಂಗಳೂರಿಗೆ ಸಿಗುವಂತೆ ಮಾಡಲು ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಮತ್ತು ನಾನು ಪರಿಶ್ರಮಪಡುತ್ತೇವೆ” ಎಂದಿದ್ದಾರೆ.
In order to fast track the #BengaluruSuburbanRail, the Extended Railway Board met today & has given its clearance.
In this regard, I assure the people of Bengaluru that Shri @PiyushGoyal Ji & I shall make all efforts to ensure the project is brought to fruition at the earliest.
— Suresh Angadi (@SureshAngadi_) November 4, 2019
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಟ್ವಿಟ್ ಮಾಡಿ, ” ಸಬ್ ಅರ್ಬನ್ ರೈಲಿಗೆ ಇದ್ದ ತೊಡಕುಗಳು ನಿವಾರಣೆಯಾಗಿವೆ. ಬೆಂಗಳೂರಿಗೆ ಸಬ್ ಅರ್ಬನ್ ರೈಲು ಎರಡು ದಶಕಗಳ ಬೇಡಿಕೆಯಾಗಿತ್ತು. ಸೋಮವಾರ ರೈಲ್ವೇ ಚೇರ್ ಮೆನ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ಆರ್ಥಿಕ ಇಲಾಖೆ ಮುಖ್ಯಸ್ಥರು ಹಾಗೂ ನೀತಿ ಆಯೋಗದ ಮುಖ್ಯಸ್ಥರ ಜೊತೆ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲಿಗೆ ಅನುಮತಿ ಸಿಕ್ಕಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.