ನವದೆಹಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕತೆ (RCEP) ವ್ಯಾಪಾರ ಒಪ್ಪಂದಕ್ಕೆ ಸೇರ್ಪಡೆಗೊಳ್ಳಲು ನಿರ್ಧರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶ್ಲಾಘಿಸಿದ್ದಾರೆ. ಅಲ್ಲದೇ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ದೂಷಿಸಿದ ಅವರು, ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಡೆಗಣಿಸಿ ಒಪ್ಪಂದವನ್ನು ಮಾಡಿಕೊಳ್ಳಲು ಅದು ಮುಂದಾಗಿತ್ತು ಎಂದಿದ್ದಾರೆ.
ಬ್ಯಾಂಕಾಕ್ನಲ್ಲಿ ಸೋಮವಾರ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕತೆ(RCEP) ಒಕ್ಕೂಟದ ಶೃಂಗಸಭೆಯಲ್ಲಿ ಪಾಲ್ಗೊಂಡ ಮೋದಿ, RCEP ಒಪ್ಪಂದಕ್ಕೆ ಒಳಪಡುವುದಿಲ್ಲ ಎಂಬ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಯನ್ನು ಎಂದಿಗೂ ನಿರ್ಲಕ್ಷ್ಯ ಮಾಡುವುದಿಲ್ಲ ಎಂದಿದ್ದಾರೆ.
“RCEPಗೆ ಸಹಿ ಮಾಡದಿರುವ ಭಾರತದ ನಿರ್ಧಾರವು ಪ್ರಧಾನಿ ನರೇಂದ್ರ ಮೋದಿಯವರ ಬಲವಾದ ನಾಯಕತ್ವ ಮತ್ತು ಎಲ್ಲಾ ಸಂದರ್ಭಗಳಲ್ಲಿಯೂ ರಾಷ್ಟ್ರೀಯ ಹಿತಾಸಕ್ತಿಯನ್ನು ಕಾಪಾಡುವ ದೃಢ ನಿಶ್ಚಯದ ಪರಿಣಾಮವಾಗಿದೆ. ಇದು ನಮ್ಮ ರೈತರು, ಎಂಎಸ್ಎಂಇಗಳು, ಹೈನುಗಾರಿಕೆ ಮತ್ತು ಉತ್ಪಾದನಾ ವಲಯ, ಔಷಧೀಯ, ಉಕ್ಕು ಮತ್ತು ರಾಸಾಯನಿಕ ಕೈಗಾರಿಕೆಗಳಿಗೆ ಬೆಂಬಲವನ್ನು ಖಚಿತಪಡಿಸುತ್ತದೆ” ಎಂದು ಶಾ ಟ್ವೀಟ್ ಮಾಡಿದ್ದಾರೆ.
“ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾಗಿಲ್ಲದಿದ್ದರೆ ಯಾವುದೇ ಒಪ್ಪಂದವನ್ನು ಮುಂದುವರೆಸಬಾರದು ಎಂಬುದು ಮೋದಿಯವರ ದೃಢವಾದ ನಿಲುವಾಗಿದೆ. ಇದು ನಿಜಕ್ಕೂ ಸ್ವಾಗತಾರ್ಹ ನಿಲುವಾಗಿದೆ. ಹಿಂದಿನ ದುರ್ಬಲ ಯುಪಿಎ ಸರ್ಕಾರವು ಭಾರತೀಯರ ಹಿತಾಸಕ್ತಿಯನ್ನು ಕಡೆಗಣಿಸಿತ್ತು” ಎಂದಿದ್ದಾರೆ.
India’s decision to not sign RCEP is a result of PM @narendramodi’s strong leadership & unflinching resolve to ensure national interest in all circumstances.
It shall ensure support to our farmers, MSMEs, dairy & manufacturing sector, pharmaceutical, steel & chemical industries.
— Amit Shah (@AmitShah) November 4, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.