ಲಕ್ನೋ: ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿಂತೆ ಸುಪ್ರೀಂಕೋರ್ಟ್ ಶ್ರೀಘ್ರದಲ್ಲೇ ಅಂತಿಮ ತೀರ್ಪನ್ನು ನೀಡಲಿದೆ. ಈ ಸಂದರ್ಭದಲ್ಲಿ ಉತ್ತರಪ್ರದೇಶದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಉಗ್ರರು ಹೊಂಚು ಹಾಕುತ್ತಿದ್ದಾರೆ. ಪ್ರಸ್ತುತ 7 ಮಂದಿ ಉಗ್ರರು ಉತ್ತರಪ್ರದೇಶದೊಳಗೆ ನುಸುಳಿದ್ದಾರೆ, ತೀರ್ಪು ಪ್ರಕಟವಾದ ಸಂದರ್ಭದಲ್ಲಿ ದುಷ್ಕೃತ್ಯಗಳನ್ನು ಎಸಗುವುದು ಅವರ ಗುರಿಯಾಗಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ನೇಪಾಳ ಮಾರ್ಗವಾಗಿ ಉಗ್ರರು ಉತ್ತರಪ್ರದೇಶಕ್ಕೆ ನುಸುಳಿದ್ದಾರೆ, 7 ಮಂದಿಯಲ್ಲಿ ಕೆಲವರು ಪಾಕಿಸ್ಥಾನ ಮೂಲದವರಾಗಿದ್ದಾರೆ. ಗುಪ್ತಚರ ಇಲಾಖೆಯು 7 ಮಂದಿಯ ಪೈಕಿ 5 ಮಂದಿ ಉಗ್ರರ ಗುರುತು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುತಿಸಲ್ಪಟ್ಟ ಐದು ಭಯೋತ್ಪಾದಕರನ್ನು ಮೊಹಮ್ಮದ್ ಯಾಕೂಬ್, ಅಬು ಹಮ್ಜಾ, ಮೊಹಮ್ಮದ್ ಶಹಬಾಜ್, ನಿಸಾರ್ ಅಹ್ಮದ್ ಮತ್ತು ಮೊಹಮ್ಮದ್ ಕೌಮಿ ಚೌಧರಿಯಾಗಿದ್ದಾರೆ. ಈ ಭಯೋತ್ಪಾದಕರು ಪ್ರಸ್ತುತ ಅಯೋಧ್ಯೆ ಮತ್ತು ಗೋರಖ್ಪುರದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಅಗತ್ಯಬಿದ್ದರೆ ಕಾನೂನು ಸುವ್ಯವಸ್ಥೆ ಕಾಪಾಡಲು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ವಿಧಿಸಲಾಗುವುದು ಎಂದು ಉತ್ತರ ಪ್ರದೇಶದ ಡಿಜಿಪಿ ಓಪಿ ಸಿಂಗ್ ಭಾನುವಾರ ಹೇಳಿದ್ದಾರೆ.
“ನಾವು ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣವಾಗಿ ಸಿದ್ಧರಿದ್ದೇವೆ. ಯಾವುದೇ ಸಂದರ್ಭದಲ್ಲೂ ಯಾರಿಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ನಮ್ಮ ಗುಪ್ತಚರ ವ್ಯವಸ್ಥೆಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ಅಗತ್ಯಬಿದ್ದರೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುವ ಅಂಶಗಳ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ವಿಧಿಸಲಾಗುತ್ತದೆ” ಎಂದು ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.