ಬೆಂಗಳೂರು: ಮಂಗಗಳ ಉಪಟಳವನ್ನು ಕಡಿಮೆಗೊಳಿಸುವ ಮತ್ತು ಮಂಗಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ‘ಮಂಕಿ ಪಾರ್ಕ್’ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ‘ಮಂಕಿ ಪಾರ್ಕ್’ ಸ್ಥಾಪನೆಯಾಗಲಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಗಳನ್ನು ಸಂರಕ್ಷಿಸಲು ಉದ್ಯಾನ ನಿರ್ಮಿಸುವ ಕುರಿಯು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಸಭೆ ನಡೆದಿದೆ.
ಪ್ರಾಯೋಗಿಕವಾಗಿ 100 ಎಕರೆ ಭೂಮಿಯಲ್ಲಿ ‘ಮಂಕಿ ಪಾರ್ಕ್’ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇಲ್ಲಿ ಮಂಗಗಳಿಗೆ ಬೇಕಾದ ಹಣ್ಣಿನ ಗಿಡಗಳನ್ನು ನೆಡಲು ಮತ್ತು ಜಲ ಮೂಲವನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ. ಅಗತ್ಯಬಿದ್ದರೆ ಹೊರಗಿನಿಂದಲೂ ಮಂಗಳಗಳಿಗೆ ಹಣ್ಣು, ಆಹಾರವನ್ನು ಪೂರೈಸಲು ನಿರ್ಧರಿಸಲಾಗಿದೆ. ಈ ಪಾರ್ಕ್ನಿಂದ ಮಂಗಗಳು ಹೊರ ಬರದಂತೆ ಸೋಲಾರ್ ಬೇಲಿ ಮತ್ತು ಕಂದಕ ನಿರ್ಮಾಣ ಮಾಡಲಾಗುತ್ತದೆ.
ಸಾರ್ವಜನಿಕರಿಗೆ ಉಪಟಳವನ್ನು ನೀಡುವ ಮತ್ತು ರೈತರು ಬೆಳೆದ ಬೆಳೆಗಳಿಗೆ ಹಾನಿಯುಂಟು ಮಾಡುವಂತಹ ಮಂಗಗಳನ್ನು ತಂದು ಈ ಉದ್ಯಾನದಲ್ಲಿ ಬಿಡಲು ನಿರ್ಧರಿಸಲಾಗಿದೆ. ಬಳಿಕ ಅವುಗಳ ವರ್ತನೆಯ ಕುರಿತು ಅಧ್ಯಯನವನ್ನೂ ನಡೆಸಲಾಗುತ್ತದೆ. ಒಂದು ವೇಳೆ ಈ ಯೋಜನೆ ಯಶಸ್ವಿಯಾದರೆ ಬೇರೆ ರಾಜ್ಯಗಳಲ್ಲೂ ‘ಮಂಕಿ ಪಾರ್ಕ್’ ತೆರೆಯುವ ಚಿಂತನೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.