ಬೆಂಗಳೂರು: ‘ನಮ್ಮ ಸರ್ಕಾರವು ನೂರು ದಿನಗಳನ್ನು ಪೂರೈಸಿದೆ. ಈ ನೂರು ದಿನಗಳನ್ನು ಸ್ವಂತಕ್ಕೆ ಬಳಕೆ ಮಾಡಿಕೊಂಡಿಲ್ಲ, ಜನರ ಕಣ್ಣೀರನ್ನು ಒರೆಸಲು, ಅವರ ದುಃಖದಲ್ಲಿ ಭಾಗಿಯಾಗಲು ಬಳಸಿಕೊಂಡಿದ್ದೇನೆ” ಎಂದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕದ ಜನತೆ ನಮ್ಮ ಕೆಲಸಗಳನ್ನು ಅಳೆಯು ಹಕ್ಕಿದೆ ಎಂದಿದ್ದಾರೆ.
ನವೆಂಬರ್ 2ಕ್ಕೆ ಯಡಿಯೂರಪ್ಪ ಸರ್ಕಾರ ಶತದಿನಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ಸರ್ಕಾರದ 100 ದಿನಗಳ ಸಾಧನೆಯನ್ನು ಬಿಂಬಿಸುವ ಪುಸ್ತಕವನ್ನು ಬಿಡುಗಡೆಗೊಳಿಸಿದೆ. ಅದರಲ್ಲಿ ರಾಜ್ಯದಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮಾಡಿರುವ ಕೆಲಸಗಳ ಬಗ್ಗೆ ವಿವರಿಸಲಾಗಿದೆ. ಅಲ್ಲದೇ, ಇತರ ಕ್ಷೇತ್ರಗಳ ಪ್ರಗತಿಗೆ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ. ಶಿಕ್ಷಕರ ನೇಮಕಾತಿ ಪ್ರಕ್ರಿಯೆ, ಸಾಲ ಮನ್ನಾ ಇತ್ಯಾದಿ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ.
“ರಾಜ್ಯದಲ್ಲಿ ಭೀಕರವಾದ ನೆರೆ ಬಂದಿತ್ತು. ಈ ಸಂದರ್ಭದಲ್ಲಿ ಒಂದು ತಿಂಗಳುಗಳ ಕಾಲ ಹಗಲು ರಾತ್ರಿ ಎನ್ನದೆ ನೆರೆ ಪೀಡಿತ ರಾಜ್ಯಗಳಿಗೆ ಭೇಟಿ ನೀಡಿದೆ. ಸಂತ್ರಸ್ಥರ ಕಷ್ಟಗಳನ್ನು ಆಲಿಸಿದೆ. ಅವರು ನೆಮ್ಮದಿಯ ಜೀವನವನ್ನು ನಡೆಸಲು ಬೇಕಾದ ಕ್ರಮವನ್ನು ನಮ್ಮ ಸರ್ಕಾರ ಕೈಗೊಂಡಿದೆ. ಅಧಿಕ ಪ್ರಮಾಣದಲ್ಲಿ ಪರಿಹಾರವನ್ನು ನೀಡಿದ್ದೇವೆ. ಇದು ನಮ್ಮ ಸಾಧನೆ” ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ನಾವು ಮಾಡಬೇಕಾದ ಕಾರ್ಯಗಳು, ಸಾಧನೆಗಳು ಸಾಕಷ್ಟಿವೆ ಎಂದಿರುವ ಅವರು, ಮುಂದಿನ ದಿನಗಳಲ್ಲಿ ಕೃಷಿ, ನೀರಾವರಿ, ವಸತಿ, ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.