ನವದೆಹಲಿ: ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಮಂದಗತಿಯ ಬಗ್ಗೆ ಅವಲೋಕಿಸಬೇಕಾದ ಅಗತ್ಯವಿದೆ ಎಂದು ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. ಅಲ್ಲದೇ, ಅಗತ್ಯವಿರುವ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಂದರೆಗೊಳಗಾದ ಜನರಿಗೆ ಸಹಾಯ ಮಾಡಲು ಆರ್ಬಿಐ ಜೊತೆ ಕೆಲಸ ಮಾಡಲು ಕೇಂದ್ರ ಸರ್ಕಾರ ಬಹಳ ಉತ್ಸುಕವಾಗಿದೆ ಎಂದಿದ್ದಾರೆ.
ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನ (ಎನ್ಎಸ್ಇ)ನ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಸೀತಾರಾಮನ್, ರಿಯಲ್ ಎಸ್ಟೇಟ್ ಕ್ಷೇತ್ರವು ಸ್ಪಿಲ್ಲೋವರ್ ಪರಿಣಾಮವನ್ನು ಹೊಂದಿದೆ , ಹೀಗಾಗಿ ಅದಕ್ಕೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ ಎಂದಿದ್ದಾರೆ.
ರಿಯಲ್ ಎಸ್ಟೇಟ್ ವಲಯದಲ್ಲಿ ಸಂಕಷ್ಟ ಅನುಭವಿಸಿರುವವರಿಗೆ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂಬುದರ ಬಗ್ಗೆ ಪರಾಮರ್ಶೆಗಳನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.
“ಈ ರಿಯಲ್ ಎಸ್ಟೇಟ್ ವಲಯವನ್ನು ಪುನರುಜ್ಜೀವನಗೊಳಿಸಲು ಸಾಕಷ್ಟು ಪರ್ಯಾಯ ನಿಧಿ(Alternative funds)ಗಳು ನಮ್ಮನ್ನು ಸಂಪರ್ಕಿಸಿವೆ ಮತ್ತು ಈ ವಲಯದಲ್ಲಿ ಹೂಡಿಕೆ ಮಾಡಲು ಉತ್ಸುಹುಕತೆಯನ್ನು ತೋರಿಸಿವೆ . ರಿಯಲ್ ಎಸ್ಟೇಟ್ ವಲಯವು ಅನೇಕ ವಲಯಗಳ ಮೇಲೆ ಸ್ಪಿಲ್ಲೋವರ್ ಪರಿಣಾಮವನ್ನು ಬೀರುತ್ತದೆ. ಸಾಮಗ್ರಿಗಳನ್ನು ಪೂರೈಸುವ ಪ್ರಮುಖ ಕೈಗಾರಿಕೆಗಳು ಮತ್ತು ಹಲವಾರು ಮನೆ ಖರೀದಿದಾರರು ಪರಿಹಾರಗಳಿಗಾಗಿ ಸರ್ಕಾರವನ್ನು ನೋಡುತ್ತಿದ್ದಾರೆ. ರಿಯಲ್ ಎಸ್ಟೇಟ್ ಕ್ಷೇತ್ರದ ಪುನರುಜ್ಜೀವನದಿಂದ ಪ್ರಯೋಜನ ಪಡೆಯುವುದು ಅವರ ನಿರೀಕ್ಷೆಯಾಗಿದೆ “ಎಂದು ಸಚಿವರು ಹೇಳಿದ್ದಾರೆ.
“ಕಳೆದ 25 ವರ್ಷಗಳಲ್ಲಿ ಪ್ರಜಾಪ್ರಭುತ್ವೀಕರಣ, ಚಿಲ್ಲರೆ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ತಂತ್ರಜ್ಞಾನವನ್ನು ಬಳಸಲು ಅಸಾಧಾರಣವಾದ ರೀತಿಯಲ್ಲಿ ಸಕಾರಾತ್ಮಕ ಒಲವು ತೋರಿಸಿದೆ” ಎಂದು ಹಣಕಾಸು ಸಚಿವರು ರಾಷ್ಟ್ರೀಯ ಸ್ಟಾಕ್ ಎಕ್ಸ್ಚೇಂಜ್ ಅನ್ನು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.