ಮಾಸ್ಕೋ: ಥರ್ಡ್ ವರ್ಲ್ಡ್ ರಾಷ್ಟ್ರಗಳಿಗೆ ಭಾರತದ ರಫ್ತನ್ನು ಗಣನೀಯ ಪ್ರಮಾಣದಲ್ಲಿ ಉತ್ತೇಜಿಸುವ ಸಲುವಾಗಿ, ರಕ್ಷಣಾ ಉಪಕರಣಗಳು ಮತ್ತು ವೇದಿಕೆಗಳ ಜಂಟಿ ಉತ್ಪಾದನೆ ಮಾಡಲು ಅವಕಾಶ ನೀಡಬೇಕೆಂದು ಭಾರತವು ರಷ್ಯಾದ ರಕ್ಷಣಾ ಉದ್ಯಮಕ್ಕೆ ಕರೆ ನೀಡಿದೆ.
ಭಾರತ-ರಷ್ಯಾ ರಕ್ಷಣಾ ಕೈಗಾರಿಕಾ ಸಹಕಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಭಾರತ ಸರ್ಕಾರವು ತನ್ನ ಮೇಕ್ ಇನ್ ಇಂಡಿಯಾ ಉಪಕ್ರಮದಡಿಯಲ್ಲಿ ಭಾರತೀಯ ಸಂಸ್ಥೆಗಳೊಂದಿಗೆ ಪಾಲುದಾರುಕತೆ ಮಾಡಿಕೊಳ್ಳುವಂತೆ ಮೂಲ ಸಲಕರಣೆ ತಯಾರಕರನ್ನು (ಒಇಎಂ) ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದ್ದಾರೆ.
“ಮೇಕ್ ಇನ್ ಇಂಡಿಯಾ ಉಪಕ್ರಮಕ್ಕೆ ಭಾರತ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಭಾರತ ಸರ್ಕಾರವು ಮೂಲ ಸಲಕರಣೆಗಳ ತಯಾರಕರನ್ನು ಭಾರತೀಯ ಸಂಸ್ಥೆಗಳೊಂದಿಗೆ ಪಾಲುದಾರಿಕೆ ಮಾಡಲು ಪ್ರೋತ್ಸಾಹಿಸುತ್ತಿದೆ, ಇದಕ್ಕಾಗಿ ‘ಮೇಕ್ ಇನ್ ಇಂಡಿಯಾ’ ಉಪಕ್ರಮಗಳನ್ನು ಬಳಸಿಕೊಳ್ಳುತ್ತಿದ್ದೇವೆ” ಎಂದು ಸಿಂಗ್ ಹೇಳಿದರು.
“ಭಾರತ ಮತ್ತು ರಷ್ಯಾ ಜಂಟಿಯಾಗಿ ರಕ್ಷಣಾ ಸಾಧನಗಳು ಮತ್ತು ವೇದಿಕೆಯನ್ನು ತಯಾರಿಸಬಹುದು, ಇದು ಥರ್ಡ್ ವರ್ಲ್ಡ್ ದೇಶಗಳಿಗೆ ಬೆಂಬಲ ನೀಡಲು ಸಾಕಷ್ಟು ಅವಕಾಶವನ್ನು ಹೊಂದಿರುತ್ತದೆ” ಎಂದು ಅವರು ಹೇಳಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ವಿದೇಶಿ ಭಾಗವಹಿಸುವಿಕೆಗಾಗಿ ರಕ್ಷಣಾ ಕ್ಷೇತ್ರ ಮತ್ತು ಉತ್ಪಾದನೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮುಕ್ತಗೊಳಿಸಿದೆ. ನಾವು ದೇಶಾದ್ಯಂತ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತಂದಿದ್ದೇವೆ, ಇದು ನಮ್ಮ ಸ್ವಾತಂತ್ರ್ಯದ ನಂತರದ ಅತಿದೊಡ್ಡ ತೆರಿಗೆ ಸುಧಾರಣೆಯಾಗಿದೆ” ಎಂದು ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.