ಚಂಡೀಗಢ: ಸಿಖ್ ಧರ್ಮದ ಪರಮೋಚ್ಛ ಗುರುವಾದ ಗುರು ನಾನಕ್ ದೇವ್ ಅವರ 550ನೇ ಜನ್ಮ ವರ್ಷಾಚರಣೆಯ ಸ್ಮರಣಾರ್ಥ ಪಂಜಾಬ್ ವಿಶೇಷ ವಿಧಾನಸಭಾ ಅಧಿವೇಶವನ್ನು ನಡೆಸಿದೆ.
ವಿಶೇಷ ಅಧಿವೇಶನದಲ್ಲಿ ಪಂಜಾಬ್ ಮತ್ತು ಹರಿಯಾಣದ ಶಾಸಕರು ಭಾಗವಹಿಸಿದ್ದರು. ಅಲ್ಲದೇ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಉಪಸ್ಥಿತರಿದ್ದರು.
ಭಾರತ ಮತ್ತು ಪಾಕಿಸ್ಥಾನ ನಡುವಿನ ಕರ್ತಾರ್ಪುರ ಕಾರಿಡಾರ್ ಶಾಂತಿ, ಸಾಮರಸ್ಯ ಮತ್ತು ಮಾನವತಾವಾದದ ದೇಗುಲದ ಕಾರಿಡಾರ್ ಆಗಲಿದೆ ಎಂದು ನಾಯ್ಡು ತಮ್ಮ ಭಾಷಣದಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.
“ಇದು ಶಾಂತಿ, ಸಾಮರಸ್ಯ ಮತ್ತು ಮಾನವತಾವಾದದ ದೇಗುಲಕ್ಕೆ, ಇಡೀ ವಿಶ್ವವೇ ಒಂದು ಕುಟುಂಬ ಎಂಬ ದೃಷ್ಟಿಕೋನಕ್ಕೆ, ಮಾನವೀಯತೆಯ ಸೇವೆಗೆ ಕಾರಿಡಾರ್ ಆಗಲಿದೆ ಎಂಬುದು ನನ್ನ ಅಚಲವಾದ ನಂಬಿಕೆಯಾಗಿದೆ” ಎಂದು ನಾಯ್ಡು ಹೇಳಿದ್ದಾರೆ.
“ಗುರುನಾನಕ್ ದೇವ್ ಅವರ ತತ್ವಗಳ ಪ್ರಕಾರ ನಾವು ಜನರಿಗೆ ಹೇಗೆ ಸೇವೆ ಸಲ್ಲಿಸಬಹುದು ಎಂಬುದಕ್ಕೆ ಒಂದು ಉದಾಹರಣೆಯಾಗಿ ನಿಲ್ಲಬೇಕು” ಎಂದು ಅವರು ಶಾಸಕರಿಗೆ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.