ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸದಾಗಿ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರನ್ನು ಪಾಕಿಸ್ಥಾನದ ಗೂಢಚಾರ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗುರಿಯಾಗಿಸಿಕೊಂಡಿದೆ ಎಂದು ಗುಪ್ತಚರ ಸಂಸ್ಥೆಗಳ ವರದಿ ತಿಳಿಸಿವೆ.
ವರದಿಯ ಪ್ರಕಾರ, ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೈತೋಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಪಾಕಿಸ್ಥಾನದ ಐಎಸ್ಐ ಜಂಟಿಯಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಕೋಟ್ಲಿ ಪ್ರದೇಶದಲ್ಲಿ ಸಭೆ ನಡೆಸಿದ್ದು, ಇದರಲ್ಲಿ ಐಎಸ್ಐ ಗವರ್ನರ್ ಮುರ್ಮು ಮೇಲೆ ದಾಳಿ ನಡೆಸುವಂತೆ ಭಯೋತ್ಪಾದಕ ಗುಂಪುಗಳಿಗೆ ಸೂಚನೆಯನ್ನು ನೀಡಿದೆ ಎನ್ನಲಾಗಿದೆ.
ವರದಿಯ ಪ್ರಕಾರ, ಇತ್ತೀಚೆಗೆ ನಡೆದ ಬ್ಲಾಕ್ ಡೆವಲಪ್ಮೆಂಟ್ ಕೌನ್ಸಿಲ್ (ಬಿಡಿಸಿ) ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ಸಹ ಭಯೋತ್ಪಾದಕರ ಟಾರ್ಗೆಟ್ ಆಗಿದ್ದಾರೆ. ಈ ದಾಳಿಗಳ ಹೊಣೆಯನ್ನು ಲಷ್ಕರ್ ಸಂಘಟನೆಯ ಭಯೋತ್ಪಾದಕ ಜಿಯಾ-ಉಲ್-ರೆಹಮಾನ್ ಮಿರ್ಗೆ ಐಎಸ್ಐ ನೀಡಿದೆ. ಜಮ್ಮು ಮತ್ತು ಕಾಶ್ಮೀರದ ಹಲವಾರು ಪ್ರಮುಖ ಬಿಜೆಪಿ ನಾಯಕರು ಎಲ್ಇಟಿ ಮತ್ತು ಹಿಜ್ಬುಲ್ ಭಯೋತ್ಪಾದಕರ ಹಿಟ್ ಲಿಸ್ಟ್ನಲ್ಲಿದ್ದಾರೆ ಎಂದು ಹೇಳಲಾಗಿದೆ.
ಭಾರತವು ಜಮ್ಮು ಮತ್ತು ಕಾಶ್ಮೀರದಿಂದ 370 ಮತ್ತು 35 ಎ ವಿಧಿ ಅನ್ನು ರದ್ದುಗೊಳಿಸಿದಾಗಿನಿಂದಲೂ ಪಾಕಿಸ್ಥಾನವು ಭಾರತದ ಗಡಿಯುದ್ದಕ್ಕೂ ಭಯೋತ್ಪಾದಕರನ್ನು ಒಳ ನುಸುಳಿಸಲು ಮತ್ತು ಅನಿಶ್ಚಿತತೆಯ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.