ನವದೆಹಲಿ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿರುವ ಎರಡು ದಿನಗಳ ಜಾಗತಿಕ ಹೂಡಿಕೆದಾರರ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದ್ದಾರೆ. ಈ ವೇಳೆ ಅಲ್ಲಿ ಆಯೋಜನೆಗೊಳಿಸಲಾದ ಪ್ರದರ್ಶನಕ್ಕೂ ಅವರು ಭೇಟಿ ನೀಡಿದ್ದಾರೆ.
ಹಿಮಾಚಲಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರೂ ಈ ವೇಳೆ ಮೋದಿಗೆ ಸಾಥ್ ನೀಡಿದರು.
ಇಂದು ಬೆಳಿಗ್ಗೆ ಧರ್ಮಶಾಲಾಗೆ ಬಂದಿಳಿದ ಮೋದಿಯವರಿಗೆ ಮುಖ್ಯಮಂತ್ರಿ ಮತ್ತು ಪ್ರವಾಸೋದ್ಯಮ ಸಚಿವರು ಅಭೂತಪೂರ್ವ ಸ್ವಾಗತವನ್ನು ಕೋರಿದರು.
ಹಿಮಾಚಲ ಪ್ರದೇಶದಲ್ಲಿರುವ ಹೂಡಿಕೆಯ ಅವಕಾಶಗಳನ್ನು ಜಗತ್ತಿನ ಮುಂದೆ ತೆರೆದಿಡುವ ಉದ್ದೇಶದಿಂದ ಎರಡು ದಿನಗಳ ಕಾಲ ಹೂಡಿಕೆ ಸಮಾವೇಶವನ್ನು ಆಯೋಜನೆಗೊಳಿಸಲಾಗಿದೆ. ನವೆಂಬರ್ 7ರಿಂದ 8ರವರೆಗೆ ಸಮಾವೇಶ ಜರಗುತ್ತಿದೆ. ಅಪಾರ ಪ್ರಮಾಣದಲ್ಲಿ ವಿದೇಶಿ ಹೂಡಿಕೆದಾರರನ್ನು ಇದು ಸೆಳೆಯುವ ನಿರೀಕ್ಷೆ ಇದೆ. ಇದರಿಂದ ರಾಜ್ಯಕ್ಕೆ ಹೆಚ್ಚಿನ ಉದ್ಯೋಗವಕಾಶಗಳು ಸೃಷ್ಟಿಯಾಗಲಿವೆ.
ಮೂಲಗಳ ಪ್ರಕಾರ, ಸುಮಾಉ 209 ವಿದೇಶಿ ನಿಯೋಗ ಮತ್ತು ಸ್ಥಳಿಯ ಉದ್ಯಮಗಳು ಇದರಲ್ಲಿ ಭಾಗಿಯಾಗಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.