ಇಸ್ಲಾಮಾಬಾದ್: ಪಾಕಿಸ್ಥಾನ ನವೆಂಬರ್ 9ರಂದು ಜರುಗಲಿರುವ ತನ್ನ ಕಡೆಯ ಕರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ಶ್ರೀ ರವಿಶಂಕರ್ ಅವರನ್ನು ಆಹ್ವಾನಿಸಿದೆ. ಆದರೆ ಈ ಆಹ್ವಾನವನ್ನು ರವಿಶಂಕರ್ ತಿರಸ್ಕೃತಗೊಳಿಸಿದ್ದಾರೆ.
“ಕಾರ್ತಾರ್ಪುರ ಕಾರಿಡಾರ್ ಯೋಜನೆಯ ಉದ್ಘಾಟನೆ ಮತ್ತು ಧಾರ್ಮಿಕ ಪ್ರವಾಸೋದ್ಯಮದ ಉತ್ತೇಜನವು ನಿಮ್ಮ ಹಿಂಸೆ ಮುಕ್ತ ಜಗತ್ತಿನ ನಿರ್ಮಾಣದ ಉದ್ದೇಶಕ್ಕೆ ಅನುಗುಣವಾಗಿದೆ” ಎಂದು ರವಿಶಂಕರ್ ಅವರಿಗೆ ಪಾಕಿಸ್ಥಾನ ಕಳುಹಿಸಿದ ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಆದರೆ ರವಿಶಂಕರ್ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗದಿರುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಮುಂಗಡ ಕಾರ್ಯಕ್ರಮಗಳ ಹಿನ್ನಲೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.
#UPDATE Due to prior commitments, Sri Sri Ravi Shankar will not be attending the #KartarpurCorridor opening. He was invited by Pakistan government. https://t.co/5ORDxvS9I1
— ANI (@ANI) November 8, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.