ನವದೆಹಲಿ: ಶತಮಾನದಷ್ಟು ಹಳೆಯ ಅಯೋಧ್ಯಾ- ಬಾಬ್ರಿ ಮಸೀದಿ ವಿವಾದದ ಬಗ್ಗೆ ಇಂದು ದೇಶದ ಸರ್ವೋಚ್ಛ ನ್ಯಾಯಾಲಯ ಅಂತಿಮ ತೀರ್ಪನ್ನು ಪ್ರಕಟಿಸಲಿದೆ, ಈ ಹಿನ್ನಲೆಯಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.
ಸರಣಿ ಟ್ವಿಟ್ ಮಾಡಿರುವ ಮೋದಿ, “ಅಯೋಧ್ಯೆ ಕುರಿತು ಸುಪ್ರೀಂಕೋರ್ಟ್ ತೀರ್ಪು ಬರಲಿದೆ. ಕಳೆದ ಕೆಲವು ತಿಂಗಳುಗಳಿಂದ, ಈ ವಿಷಯವನ್ನು ಸುಪ್ರೀಂ ಕೋರ್ಟ್ನಲ್ಲಿ ನಿರಂತರವಾಗಿ ವಿಚಾರಣೆ ನಡೆಸಲಾಗುತ್ತಿತ್ತು, ಇಡೀ ದೇಶವು ಕುತೂಹಲದಿಂದ ನೋಡುತ್ತಿತ್ತು. ಈ ಅವಧಿಯಲ್ಲಿ, ಸಮಾಜದ ಎಲ್ಲಾ ವರ್ಗದವರು ಸದ್ಭಾವನೆಯ ವಾತಾವರಣವನ್ನು ಕಾಪಾಡುವಲ್ಲಿ ಮಾಡಿದ ಪ್ರಯತ್ನಗಳು ಬಹಳ ಪ್ರಶಂಸನೀಯವಾಗಿವೆ” ಎಂದಿದ್ದಾರೆ.
”ದೇಶದ ನ್ಯಾಯಾಂಗದ ಗೌರವವನ್ನು ಎತ್ತಿಹಿಡಿಯುತ್ತ, ಸಮಾಜದ ಎಲ್ಲಾ ಪಕ್ಷದವರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು, ಎಲ್ಲ ಪಕ್ಷಗಾರರು ಈ ಹಿಂದೆ ಸಾಮರಸ್ಯ ಮತ್ತು ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ಮಾಡಿದ ಎಲ್ಲ ಪ್ರಯತ್ನಗಳು ಸ್ವಾಗತಾರ್ಹವಾಗಿವೆ. ನ್ಯಾಯಾಲಯದ ತೀರ್ಪಿನ ನಂತರವೂ ಕೂಡ ನಾವೆಲ್ಲರೂ ಒಟ್ಟಾಗಿ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು” ಎಂದಿದ್ದಾರೆ.
ಆಯೋಧ್ಯಾದ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ತೀರ್ಪನ್ನು ನೀಡಿದರೂ, ಅದು ಯಾರ ಸೋಲು ಮತ್ತು ಗೆಲುವು ಆಗಿರುವುದಿಲ್ಲ. ಈ ತೀರ್ಪು ಭಾರತದ ಶಾಂತಿ, ಏಕತೆ ಮತ್ತು ಸದ್ಭಾವನೆಯ ಮಹಾನ್ ಪರಂಪರೆಯನ್ನು ಇನ್ನಷ್ಟು ಬಲಪಡಿಸಲಿ ಎಂಬುದು ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು ನಾನು ಎಲ್ಲಾ ದೇಶವಾಸಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆ” ಎಂದಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೂಡ ನಾಡಿನ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಟ್ವಿಟ್ ಮಾಡಿರುವ ಯಡಿಯೂರಪ್ಪ, “ಶತಮಾಣದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ. ತೀರ್ಪು ಏನೇ ಆಗಿರಲಿ ಶಾಂತಿ-ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.