ನವದೆಹಲಿ: ಶತಮಾನಗಳಷ್ಟು ಹಳೆಯದಾದ ಅಯೋಧ್ಯಾ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಇಂದು ಐತಿಹಾಸಿಕ ತೀರ್ಪನ್ನು ಪ್ರಕಟಗೊಳಿಸಿದೆ. ಅಯೋಧ್ಯಾ ಭೂಮಿಯನ್ನು ಕೇಂದ್ರ ಸರ್ಕಾರದ ನೇತೃತ್ವದ ಸಮಿತಿಗೆ ಹಸ್ತಾಂತರ ಮಾಡಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದಿದೆ. ಇದಕ್ಕಾಗಿ 3 ತಿಂಗಳೊಳಗೆ ಯೋಜನೆ ರೂಪಿಸುವಂತೆ ಆದೇಶಿಸಿದೆ. ಮುಸ್ಲಿಂರಿಗೆ ಬೇರೆ ಕಡೆ ಪರ್ಯಾಯ ಭೂಮಿಯನ್ನು ಒದಗಿಸುವಂತೆ ಸೂಚಿಸಿದೆ.
ಭಾರತ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ, ನ್ಯಾಯಮೂರ್ತಿ ಎಸ್.ಎ ಬೊಬ್ಡೆ, ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ, ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್ ಪ್ರಕರಣದ ಬಗ್ಗೆ 1500 ಪುಟಗಳ ತೀರ್ಪನ್ನು ಪ್ರಕಟಿಸಿದೆ.
ಸರ್ವೋಚ್ಛ ನ್ಯಾಯಾಲಯ ಹೇಳಿದ ಪ್ರಮುಖ ಅಂಶಗಳು ಇಂತಿವೆ:
ಅಯೋಧ್ಯಾ ಭೂಮಿ ಕೇಂದ್ರ ಸರ್ಕಾರ ನೇತೃತ್ವದ ಸಮಿತಿಗೆ ಹಸ್ತಾಂತರ, ಸುನ್ನಿ ವಕ್ಫ್ ಬೋರ್ಡ್ ಹಾಕಿದ್ದ ಅರ್ಜಿ ವಜಾ. ಭೂಮಿ ನಮ್ಮದು ಎಂಬುದಕ್ಕೆ ಸುನ್ನಿ ಬೋರ್ಡ್ ಯಾವುದೇ ಸಾಕ್ಷ್ಯ ಒದಗಿಸಿಲ್ಲ. ಮುಸ್ಲಿಂರಿಗೆ ಪರ್ಯಾಯವಾಗಿ ಭೂಮಿ ನೀಡಬೇಕು.
ಕಂದಾಯ ಇಲಾಖೆ ಪ್ರಕಾರ ವಿವಾದಿತ ಜಮೀನು ಸರ್ಕಾರಿ ಜಮೀನಾಗಿದೆ. ಮಸೀದಿ ಅಡಿಪಾಯದ ಕೆಳಗೆ ಮುಸ್ಲಿಂಯೇತರ ಕಟ್ಟಡವಾಗಿದೆ. ಉತ್ಫನನ ವೇಳೆ ಸಿಕ್ಕ ಕಲಾಕೃತಿಗಳು ಇಸ್ಲಾಮಿಕ್ ಆಗಿರಲಿಲ್ಲ. ಹಿಂದೂ ದೇವಾಲಯ ನಾಶ ಮಾಡಿರುವ ಬಗ್ಗೆಯೂ ಸಾಕ್ಷ್ಯಗಳಿಲ್ಲ. ಮಂದಿರ ಒಡೆದು ಮಸೀದಿ ಕಟ್ಟಲಾಗಿದೆ ಎಂಬುದಕ್ಕೂ ಸಾಕ್ಷಿ ಇಲ್ಲ. ಈ ಬಗ್ಗೆ ಪುರಾತನ ಇಲಾಖೆ ಖಚಿತವಾಗಿ ಹೇಳಿಲ್ಲ. ಹಿಂದೂಗಳು ಅಯೋಧ್ಯೆಯನ್ನು ರಾಮಜನ್ಮಭೂಮಿ ಎಂದು ನಂಬುತ್ತಾರೆ. 12 ರಿಂದ 16 ನೇ ಶತಮಾನದವರೆಗೆ ಏನಿತ್ತು ಎಂಬುದರ ಬಗ್ಗೆ ಯಾವುದೇ ಪುರಾವೆಗಳಿಲ್ಲ. ರಾಮ ಅಯೋಧ್ಯೆಯಲ್ಲೇ ಹುಟ್ಟಿದ್ದ ಎನ್ನುವ ಬಗ್ಗೆ ಇಸ್ಲಾಂನಲ್ಲೂ ನಂಬಿಕೆ ಇದೆ. ಆದರೆ ಇದೇ ಜಾಗವನ್ನು ಬಾಬರಿ ಮಸೀದಿ ಎನ್ನುತ್ತಾರೆ. ನಿರ್ಮೋಹಿ ಅಖಾಡ ಅರ್ಜಿ ವಜಾ, ರಾಮ ಲಲ್ಲಾ ಮುಖ್ಯ ಅರ್ಜಿದಾರ ಎಂದು ಮಾನ್ಯ ಮಾಡಿದ ಸುಪ್ರೀಂಕೋರ್ಟ್.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.