ನವದೆಹಲಿ: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಸ್ವಾಗತ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಲ್ಲದೇ, ಭಾರತದ ಶಾಂತಿ, ಸೌಹಾರ್ದತೆಯ ಪರಂಪರೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು ಎಂದು ದೇಶದ ಜನತೆಗೆ ಮನವಿಯನ್ನು ಮಾಡಿಕೊಂಡಿದ್ದಾರೆ.
“ಶ್ರೀರಾಮ ಜನ್ಮಭೂಮಿ ಕುರಿತು ಸರ್ವೋಚ್ಛ ನ್ಯಾಯಾಲಯ ಸರ್ವಾನುಮತದಿಂದ ನೀಡಿದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಈ ಆದೇಶವನ್ನು ಸಹಜವಾಗಿ ಸ್ವೀಕರಿಸುತ್ತಾ, ಶಾಂತಿ ಮತ್ತು ಸೌಹಾರ್ದತೆಯಿಂದ ತುಂಬಿರುವ ನಮ್ಮ ‘ಏಕ ಭಾರತ-ಶ್ರೇಷ್ಠ ಭಾರತ’ ಪ್ರತಿಜ್ಞೆಗೆ ಕಟಿಬದ್ಧರಾಗಿರೋಣ ಎಂದು ನಾನು ಎಲ್ಲಾ ಸಮುದಾಯಗಳ ಮತ್ತು ಧರ್ಮಗಳ ಜನರಲ್ಲಿ ಮನವಿ ಮಾಡುತ್ತೇನೆ” ಎಂದು ಅಮಿತ್ ಶಾ ಟ್ವಿಟ್ ಮಾಡಿದ್ದಾರೆ.
“ಈ ಐತಿಹಾಸಿಕ ತೀರ್ಪು ಸ್ವತಃ ಒಂದು ಮಹತ್ವದ ಮೈಲಿಗಲ್ಲು ಎಂದು ಸಾಬೀತುಪಡಿಸುತ್ತದೆ ಎಂಬ ವಿಶ್ವಾಸ ನನಗಿದೆ. ಈ ನಿರ್ಧಾರವು ಭಾರತದ ಏಕತೆ, ಸಮಗ್ರತೆ ಮತ್ತು ಶ್ರೇಷ್ಠ ಸಂಸ್ಕೃತಿಗೆ ಮತ್ತಷ್ಟು ಬಲವನ್ನು ನೀಡುತ್ತದೆ. ದಶಕಗಳಿಂದ ಇದ್ದ ವಿವಾದ ಇಂದು ಈ ತೀರ್ಪಿನೊಂದಿಗೆ ಅಂತಿಮಗೊಂಡಿದೆ. ಭಾರತದ ನ್ಯಾಯ ವ್ಯವಸ್ಥೆಯನ್ನು ಎತ್ತಿಹಿಡಿದ ಎಲ್ಲಾ ನ್ಯಾಯಮೂರ್ತಿಗಳನ್ನು ನಾನು ಅಭಿನಂದಿಸುತ್ತೇನೆ” ಎಂದಿದ್ದಾರೆ.
“ದಶಕಗಳಿಂದ ಇದ್ದ ವಿವಾದಕ್ಕೆ ಈ ತೀರ್ಪಿನ ಮೂಲಕ ಇಂದು ಅಂತಿಮ ರೂಪ ಸಿಕ್ಕಿದೆ” ಎಂದಿದ್ದಾರೆ.
श्रीराम जन्मभूमि पर सर्वसम्मति से आये सर्वोच्च न्यायालय के फैसले का मैं स्वागत करता हूँ।
मैं सभी समुदायों और धर्म के लोगों से अपील करता हूँ कि हम इस निर्णय को सहजता से स्वीकारते हुए शांति और सौहार्द से परिपूर्ण ‘एक भारत-श्रेष्ठ भारत’ के अपने संकल्प के प्रति कटिबद्ध रहें।
— Amit Shah (@AmitShah) November 9, 2019
दशकों से चले आ रहे श्री राम जन्मभूमि के इस कानूनी विवाद को आज इस निर्णय से अंतिम रूप मिला है। मैं भारत की न्याय प्रणाली व सभी न्यायमूर्तियों का अभिनन्दन करता हूँ।
— Amit Shah (@AmitShah) November 9, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.