ನವದೆಹಲಿ: ಶ್ರೀರಾಮ ಜನ್ಮಭೂಮಿಯ ಕುರಿತು ಸರ್ವೋಚ್ಛ ನ್ಯಾಯಾಲಯವು ಸರ್ವಾನುಮತದಿಂದ ನೀಡಿದ ಐತಿಹಾಸಿಕ ತೀರ್ಪನ್ನು ಭಾರತೀಯ ಜನತಾ ಪಕ್ಷವು ಸ್ವಾಗತಿಸುತ್ತದೆ. ಈ ತೀರ್ಪು ನಮ್ಮ ಸಮಾಜದ ಎಲ್ಲಾ ವರ್ಗಗಳನ್ನು ಪ್ರತಿನಿಧಿಸುವ ಅಂತರ್ಗತ ದೃಷ್ಟಿಕೋನಗಳಿಗೆ ಉದಾಹರಣೆಯಾಗಿದೆ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ಒಗ್ಗಟ್ಟಿನ ಮೂಲಕ ನಮ್ಮ ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸತ್ವವನ್ನು ನಲುಗದಂತೆ ಕಾಪಾಡಿದ ದೇಶದ ಜನರಿಗೂ ನಮ್ಮ ನಮನಗಳು.
ದೇಶ ಹಾಗೇ. ಈ ತೀರ್ಪು ನಾವು ಒಗ್ಗೂಡಿದ್ದೇವೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವದ ಬೇರುಗಳು ಬಹಳ ಬಲಿಷ್ಠವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದಿದ್ದಾರೆ.
ಭಾರತೀಯ ಜನತಾ ಪಕ್ಷವು ರಾಮ ಮಂದಿರ ನಿರ್ಮಾಣಕ್ಕೆ ಸದಾ ಬದ್ಧವಾಗಿದೆ. ಪಾಲಂಪುರ ನಿರ್ಣಯದಿಂದ ಇಲ್ಲಿಯವರೆಗೆ ಬಿಜೆಪಿ ಈ ವಿಷಯದಲ್ಲಿ ಅತ್ಯಂತ ಪ್ರಾಮಾಣಿಕ ಮತ್ತು ಸಕಾರಾತ್ಮಕ ಪಾತ್ರವನ್ನು ವಹಿಸಿದೆ ಮತ್ತು ತನ್ನೆಲ್ಲಾ ಜವಾಬ್ದಾರಿಯನ್ನು ನಿರ್ವಹಿಸಿದೆ ಎಂದಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರದ ಅವಧಿಯಲ್ಲೇ ಶ್ರೀರಾಮನ ದೇವಾಲಯದ ವಿವಾದವು ಬಗೆಹರಿದಿದೆ ಎಂಬುದು ನಮಗೆ ತೃಪ್ತಿದಾಯಕ ವಿಷಯವಾಗಿದೆ. ದೇಶದ ಇತಿಹಾಸವನ್ನು ಪುನಃ ಬರೆಯುವಾಗಲೆಲ್ಲಾ, ಇದು ಕೇಂದ್ರದಲ್ಲಿ ಬಿಜೆಪಿ ಅಧಿಕಾರಾವಧಿಯಲ್ಲಿ ಬಗೆಹರಿದಿತ್ತು ಎಂದು
ಚಿನ್ನದ ಅಕ್ಷರಗಳಲ್ಲಿ ಬರೆಯಲಾಗಿದೆ. ಈ ಐತಿಹಾಸಿಕ ತೀರ್ಪನ್ನು ನಾವು ಸ್ವಾಗತಿಸುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.