ನವದೆಹಲಿ: ಅಯೋಧ್ಯ ಶ್ರೀ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪಕ್ಷದವರು ಸಾಕ್ಷ್ಯವಾಗಿ ಸುಪ್ರೀಂಕೋರ್ಟಿಗೆ ಸಲ್ಲಿಕೆ ಮಾಡಿದ್ದ ಪುರಾತತ್ವ ಇಲಾಖೆ (Archaeological survey of India)ದ ವರದಿಯು ಶೀಘ್ರದಲ್ಲೇ ಸಾರ್ವಜನಿಕರಿಗಾಗಿ ಪುಸ್ತಕವಾಗಿ ಪ್ರಕಟಗೊಳ್ಳಲಿದೆ. ಈ ಬಗ್ಗೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರು ಮಾಹಿತಿ ನೀಡಿದ್ದಾರೆ.
“ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇವೆ. ಸುಪ್ರೀಂಕೋರ್ಟಿಗೆ ಅಯೋಧ್ಯಾ ಪ್ರಕರಣದಲ್ಲಿ ಸಾಗಿಸಲಾಗಿದ್ದ ASI ವರದಿಯನ್ನು ಶೀಘ್ರದಲ್ಲೇ ಸಾರ್ವಜನಿಕರಿಗಾಗಿ ಪುಸ್ತಕವಾಗಿ ಪ್ರಕಟಿಸುತ್ತೇವೆ” ಎಂದು ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ.
ವಿವಾದಿತ ಅಯೋಧ್ಯಾ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಮರುದಿನವೇ ಸಚಿವರು ಈ ಘೋಷಣೆಯನ್ನು ಮಾಡಿದ್ದಾರೆ.
ASI ವರದಿಯನ್ನು ಜಾರಿಗೆ ಆಧರಿಸಿಯೇ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಬಾಬ್ರಿ ಮಸೀದಿಯನ್ನು ಖಾಲಿಜಾಗದಲ್ಲಿ ನಿರ್ಮಾಣ ಮಾಡಲಾಗಿಲ್ಲ, ಮಸೀದಿಯ ಕೆಳಗಡೆ ಹಿಂದೂ ರಚನೆ ಇತ್ತು ಎಂದು ಸುಪ್ರೀಂಕೋರ್ಟ್ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.