ಮಂಗಳೂರು : ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳ ನ್ಯಾಯೋಚಿತ ಹೋರಾಟಗಳಿಗಾಗಿ ಮಾನ್ಯ ಉಚ್ಚ ನ್ಯಾಯಾಲಯ ಹಾಗೂ ಮಾನ್ಯ ಸರ್ವೊಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ಅನ್ಯಾಯವೆಸಗಿದ ಹಾಗೂ ಸದನ ಸಮಿತಿಯ ವರದಿಯನ್ನು ಧಿಕ್ಕರಿಸಿ ಶಿಕ್ಷಕ ಸಮುದಾಯಕ್ಕೆ ವೇತನ ಪುನರ್ ನಿಗದಿಕರಣ, ಜೇಷ್ಠತೆ ಹಾಗೂ ಪಿಂಚಣಿ ಸೌಲಭ್ಯಗಳನ್ನು ವಂಚಿಸಿದ ರಾಜ್ಯ ಸರ್ಕಾರದ ನಿರ್ಣಯವನ್ನು ತಿರಸ್ಕರಿಸಿ ಮುಂದಿನ ೮ ವಾರದೊಳಗೆ ಈ ಎಲ್ಲಾ ಸೌಲಭ್ಯಗಳನ್ನು ಮರು ನೀಡುವಂತೆ ಆದೇಶಿಸಿದ ಮಾನ್ಯ ನ್ಯಾಯಾಲಯದ ತೀರ್ಪಗೆ ವಿಧಾನ ಪರಿಷತ್ತಿನ ವಿರೋದ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಹರ್ಷ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕಳೆದ ಕೆಲವು ವರ್ಷಗಳ ಸಂಘಟಿತ ಹೋರಾಟ ಹಾಗೂ ಶಿಕ್ಷಕರ ಸಮಸ್ಯೆಯನ್ನು ಅರ್ಥೈಸಿಕೊಂಡು ನ್ಯಾಯಾಲಯದ ಆದೇಶವನ್ನು ಗೌರವಿಸಿ ಶಿಕ್ಷಕರ ನ್ಯಾಯೋಚಿತ ಬೇಡಿಕೆಗಳನ್ನು ಈ ಕೂಡಲೆ ಪೂರೈಸುವಂತೆ ಹಾಗೂ ಮತ್ತೊಮ್ಮೆ ವಿಳಂಬ ನೀತಿಯನ್ನು ಅನುಸರಿಸಿ ಅನ್ಯಾಯ ವೆಸಗದೆ ನ್ಯಾಯಾಲಯದ ಆದೇಶವನ್ನು ಅತೀ ಶೀಘ್ರವಾಗಿ ಅನುಷ್ಠಾನ ಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸುಧೀರ್ಘ ಹೋರಾಟದಲ್ಲಿ ತಾಳ್ಮೆಯಿಂದ ಸಹಕರಿಸಿದ ಸಮಸ್ತ ಶಿಕ್ಷಕ ಸಂಘಟನೆಗಳನ್ನು ಹಾಗೂ ಶಿಕ್ಷಕ ಸಮುದಾಯವನ್ನು ಆತ್ಮೀಯವಾಗಿ ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.