ನವದೆಹಲಿ: ದೆಹಲಿಯ ಜೆಎನ್ಯು ಆವರಣದಲ್ಲಿ ನಿರ್ಮಾಣವಾಗಿದ್ದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ನ. 14 ರಂದು ಪ್ರತಿಮೆಯನ್ನು ಧ್ವಂಸ ಮಾಡಲಾಗಿತ್ತು. ಈ ಪ್ರತಿಮೆಯು ಮುಂದಿನ ವರ್ಷ ಜನವರಿಯಲ್ಲಿ ಅನಾವರಣಗೊಳ್ಳುವುದರಲ್ಲಿತ್ತು.
ವಸಂತ್ ಕುಂಜ್ ನಾರ್ತ್ ಪೊಲೀಸ್ ಸ್ಟೇಶನ್ನಿನಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ಪರಿಶೀಲನೆಯನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಜೆಎನ್ಯುನ ಸ್ವಾಮಿ ವಿವೇಕಾನಂದ ಪ್ರತಿಮೆ ಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬುದ್ಧ ಸಿಂಗ್ ಅವರು ದೂರು ದಾಖಲಿಸಿದ್ದಾರೆ. ಸೆಕ್ಷನ್ 426 (ಕಿಡಿಗೇಡಿತನದ ಶಿಕ್ಷೆ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ತಡೆಗಟ್ಟುವ ಕಾಯ್ದೆ, 1984 ರ ಅಡಿಯಲ್ಲಿ ಎಫ್ಐಆರ್ ದಾಖಲಿಸುವಂತೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಈ ಪ್ರತಿಮೆಯು ಅಡ್ಮಿನಿಸ್ಟ್ರೇಟಿವ್ ಬ್ಲಾಕ್ನಲ್ಲಿದೆ ಮತ್ತು ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ಇದನ್ನು ಕಳೆದ ಜನವರಿ 5 ರಂದು ಸ್ಥಾಪಿಸಲಾಯಿತು. ಪ್ರತಿಮೆಯನ್ನು ಇದುವರೆಗೆ ಅನಾವರಣಗೊಳಿಸಲಾಗಿಲ್ಲ, ಬಟ್ಟೆಯಿಂದ ಮುಚ್ಚಿಡಲಾಗಿತ್ತು.
“ನವೆಂಬರ್ 14 ರಂದು ಬೆಳಿಗ್ಗೆ 6.30 ಕ್ಕೆ ಕೆಲವು ವಿದ್ಯಾರ್ಥಿಗಳು ಪ್ರತಿಮೆಯನ್ನು ಧ್ವಂಸ ಮಾಡಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿತು. ನಾನು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದಾಗ ಪ್ರತಿಮೆಯ ಬುಡವದಲ್ಲಿ ಆಕ್ಷೇಪಾರ್ಹ ಸಂದೇಶವನ್ನು ಬರೆಯಲಾಗಿತ್ತು ಮತ್ತು ಪ್ರತಿಮೆಯ ಮೇಲೆ ಹಾಕಲಾಗಿದ್ದ ಬಟ್ಟೆಯನ್ನು ಹರಿದು ಹಾಕಲಾಗಿತ್ತು” ಎಂದು ಬುದ್ಧ ಸಿಂಗ್ ಹೇಳಿದ್ದಾರೆ.
ನವೆಂಬರ್ 14 ರಂದು ಬೆಳಿಗ್ಗೆ 4 ರಿಂದ ಬೆಳಿಗ್ಗೆ 6 ಗಂಟೆಯೊಳಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.