ಲಕ್ನೋ: ಅಲಹಾಬಾದ್ ಹೆಸರನ್ನು ಪ್ರಯಾಗ್ರಾಜ್ ಎಂದೂ. ಮೊಘಲ್ಸರಾಯ್ ಹೆಸರನ್ನು ದೀನ್ ದಯಾಳ್ ಉಪಾಧ್ಯಾಯ ನಗರ ಎಂದೂ ಬದಲಾಯಿಸಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಈಗ ಆಗ್ರಾ ಹೆಸರನ್ನು ಅಗ್ರವಾನ್ ಎಂದು ಬದಲಾಯಿಸಲು ಯೋಜಿಸುತ್ತಿದೆ.
ಆಗ್ರಾದ ಅಂಬೇಡ್ಕರ್ ವಿಶ್ವವಿದ್ಯಾಲಯಕ್ಕೆ ಹೆಸರಿನ ಐತಿಹಾಸಿಕ ಅಂಶವನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರ ಕೇಳಿದೆ. ವಿಶ್ವವಿದ್ಯಾಲಯದ ಇತಿಹಾಸ ವಿಭಾಗವು ಈಗ ಈ ನಿಟ್ಟಿನ ಪ್ರಸ್ತಾಪವನ್ನು ಎದುರು ನೋಡುತ್ತಿದೆ.
ಆಗ್ರಾದ ಡಾ.ಬಿ.ಆರ್.ಅಂಬೇಡ್ಕರ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಸುಗಮ್ ಆನಂದ್ ಈ ವಿಷಯವನ್ನು ಖಚಿತಪಡಿಸಿದ್ದು, “ಆಗ್ರಾ ನಗರಕ್ಕೆ ಬೇರೆ ಹೆಸರು ಇರುವ ಬಗ್ಗೆ ಐತಿಹಾಸಿಕ ಪುರಾವೆಗಳನ್ನು ಹುಡುಕಲು ನಮಗೆ ರಾಜ್ಯ ಸರ್ಕಾರದಿಂದ ಪತ್ರ ಬಂದಿದೆ. ನಾವು ಸಂಶೋಧನೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಶೀಘ್ರದಲ್ಲೇ ಪತ್ರಕ್ಕೆ ಉತ್ತರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಮೂಲಗಳ ಪ್ರಕಾರ, ತಾಜ್ ಮಹಲ್ ಇರುವ ನಗರದ ಮೂಲ ಹೆಸರು ಅಗ್ರವಾನ್ ಎಂದು ಕೆಲವು ಇತಿಹಾಸಕಾರರು ನಂಬಿದ್ದಾರೆ. ಹೀಗಾಗಿ ಯೋಗಿ ಸರ್ಕಾರವು ಆಗ್ರಾದಿಂದ ಅಗ್ರವಾನ್ ಎಂದು ಬದಲಾಯಿಸಲು ಯೋಜಿಸುತ್ತಿದೆ.
ಅಗ್ರವಾನ್ ಹೆಸರನ್ನು ಆಗ್ರಾ ಎಂದು ಬದಲಾಯಿಸಿದ ಸಂದರ್ಭಗಳು ಮತ್ತು ಸಮಯವನ್ನು ಪರಿಶೀಲಿಸುವಂತೆ ಇತಿಹಾಸಕಾರರು ಮತ್ತು ತಜ್ಞರನ್ನು ಕೇಳಲಾಗಿದೆ.
ಇತ್ತೀಚೆಗೆ ನಿಧನರಾದ ಬಿಜೆಪಿ ಶಾಸಕ ಜಗನ್ ಪ್ರಸಾದ್ ಗರ್ಗ್ ಅವರು ಈ ಹಿಂದೆ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು, ಆಗ್ರಾ ಹೆಸರನ್ನು ಅಗ್ರವಾನ್ ಎಂದು ಬದಲಾಯಿಸುವಂತೆ ಕೋರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.