ನವದೆಹಲಿ: ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಸೋಮವಾರ ನವದೆಹಲಿಯಲ್ಲಿ ಭಾರತೀಯ ಪೋಶನ್ ಕೃಷಿ ಕೋಶ್ (ಬಿಪಿಕೆಕೆ)ಯನ್ನು ಉದ್ಘಾಟನೆಗೊಳಿಸಿದರು.
ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್ನ ಸಹ-ಅಧ್ಯಕ್ಷರೂ ಆಗಿರುವ ಬಿಲ್ ಗೇಟ್ಸ್ ತಮ್ಮ ಭಾಷಣದಲ್ಲಿ, ಭಾರತದಲ್ಲಿನ ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸಲು ನಮ್ಮ ಫೌಂಡೇಶನ್ ಬಯಸುತ್ತದೆ ಎಂದು ಹೇಳಿದರು. “ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್ ಭಾರತದಲ್ಲಿ ಪರಿಹರಿಸಲು ಬಯಸುವ ಒಂದು ಸಮಸ್ಯೆ ಇದ್ದರೆ ಅದು ಮಹಿಳೆಯರಿಗೆ, ಗರ್ಭಿಣಿಯರಿಗೆ ಮತ್ತು ಮಕ್ಕಳ ಅಪೌಷ್ಟಿಕತೆಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸುವುದರಿಂದ ಭಾರತದ ಅಭಿವೃದ್ಧಿಯಲ್ಲಿ ಮಹತ್ವದ ಬದಲಾವಣೆಯಾಗುತ್ತದೆ “ಎಂದು ಅವರು ಹೇಳಿದ್ದಾರೆ.
ಕಳೆದ ಒಂದು ದಶಕದಲ್ಲಿ ಭಾರತೀಯ ಆರೋಗ್ಯ ವ್ಯವಸ್ಥೆಯಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬಂದಿವೆ ಎಂದು ಅವರು ಹೇಳಿದರು. “ಕಳೆದ ದಶಕದಲ್ಲಿ ಭಾರತೀಯ ಆರೋಗ್ಯ ವ್ಯವಸ್ಥೆಯಲ್ಲಿನ ಸುಧಾರಣೆಗಳು ಗಮನಾರ್ಹವಾಗಿವೆ. ನಿರ್ದಿಷ್ಟ ರೋಗ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿವೆ ಮತ್ತು ಲಸಿಕೆ ವ್ಯಾಪ್ತಿ ಗಣನೀಯವಾಗಿ ಸುಧಾರಿಸಿದೆ. 2011ರಲ್ಲಿ ಭಾರತವು ಪೋಲಿಯೊ ರೋಗದ ಕೊನೆಯ ಪ್ರಕರಣವನ್ನು ಕಂಡಿದೆ” ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮೊದಲು ಮಾಧ್ಯಮಕ್ಕೆ ಸಂದರ್ಶನ ನೀಡಿದ ಅವರು, ಭಾರತದ ಆಧಾರ್ ಗುರುತಿನ ವ್ಯವಸ್ಥೆ ಮತ್ತು ಹಣಕಾಸು ಸೇವೆಗಳು ಮತ್ತು ಔಷಧ ಕ್ಷೇತ್ರಗಳಲ್ಲಿನ ಸಾಧನೆಯನ್ನು ವಿಶೇಷವಾಗಿ ಅಭಿನಂದಿಸಿದರು.
ಮುಂದಿನ ದಶಕದಲ್ಲಿ ಭಾರತವು ಅತ್ಯಂತ ಕ್ಷಿಪ್ರ ಆರ್ಥಿಕ ಬೆಳವಣಿಗೆಯ ಸಾಮರ್ಥ್ಯವನ್ನು ಹೊಂದಿದೆ, ಇದು ಜನರನ್ನು ಬಡತನದಿಂದ ಮೇಲಕ್ಕೆತ್ತಲಿದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಆದ್ಯತೆಗಳಲ್ಲಿ ಮಹತ್ವದ ರೀತಿಯಲ್ಲಿ ಹೂಡಿಕೆ ಮಾಡಲು ಸರ್ಕಾರಕ್ಕೆ ಅವಕಾಶ ನೀಡುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.