ನವದೆಹಲಿ: ವೈಭವೋಪೇತ ರೈಲಿನಲ್ಲಿ ಪ್ರಯಾಣಿಸುವ ಕರ್ನಾಟಕ ಜನರ ಕನಸು ಶೀಘ್ರದಲ್ಲೇ ನನಸಾಗಲಿದೆ. ಗೋಲ್ಡನ್ ಚಾರಿಯೋಟ್ ಅನ್ನು ಮಾರುಕಟ್ಟೆಗೆ ತರಲು ಮತ್ತು ನಿರ್ವಹಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ)ವು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಸ್ವರ್ಣ ರಥ (ಗೋಲ್ಡನ್ ಚಾರಿಯೋಟ್) ದಕ್ಷಿಣ ಭಾರತದ ಏಕೈಕ ಐಷಾರಾಮಿ ರೈಲು ಆಗಿದೆ. ಆದರೆ, ಭಾರೀ ನಷ್ಟದಿಂದಾಗಿ ಕರ್ನಾಟಕ ಸರ್ಕಾರವು ತಾತ್ಕಾಲಿಕವಾಗಿ ಇದರ ಸೇವೆಗಳನ್ನು ಸ್ಥಗಿತಗೊಳಿಸಿತ್ತು
ನವದೆಹಲಿಯ ರೈಲು ಭವನದಲ್ಲಿ ರೈಲ್ವೆ ರಾಜ್ಯ ಸಚಿವ ಸುರೇಶ್ ಸಿ ಅಂಗಡಿ ಮತ್ತು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಮತ್ತು ರಾಜ್ಯದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಉಭಯ ಸಂಸ್ಥೆಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಒಪ್ಪಂದದ ಪ್ರಕಾರ, ಕೆಎಸ್ಟಿಡಿಸಿ ರೈಲನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಿದ್ದು, ಅದು ರೈಲಿನ ಆಂತರಿಕ ನವೀಕರಣವನ್ನು ಕೈಗೊಳ್ಳಲಿದೆ ಮತ್ತು ಅದಕ್ಕೆ ಕರ್ನಾಟಕದ ಸೊಬಗನ್ನು ನೀಡಲಿದೆ. ಮಾರ್ಚ್ 2020 ರಿಂದ ಸ್ವರ್ಣ ರಥವು ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಹೊಸ ಒಳಾಂಗಣ ವಿನ್ಯಾಸವು ಇತಿಹಾಸ, ಸಂಸ್ಕೃತಿ, ವನ್ಯಜೀವಿ ಮತ್ತು ಪ್ರಕೃತಿಯ ಮಿಶ್ರಣವಾಗಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.