ನವದೆಹಲಿ: ಉತ್ತಮ ಆಡಳಿತವನ್ನು ನೀಡಬೇಕು ಎಂಬ ಉದ್ದೇಶದೊಂದಿಗೆ ಕೇಂದ್ರ ಸರಕಾರವು ಕೇಂದ್ರದ ಪ್ರದೇಶಗಳಾದ ಡಾಮನ್ ಮತ್ತು ದಿಯು, ದಾದ್ರಾ ಮತ್ತು ನಗರ್ ಹವೇಲಿಗಳನ್ನು ವಿಲೀನಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಉತ್ತಮ ಆಡಳಿತವನ್ನು ನೀಡುವ ಮತ್ತು ವಿವಿಧ ಕಾರ್ಯಗಳಲ್ಲಿ ನಡೆಯುತ್ತಿರುವ ವಂಚನೆಗಳನ್ನು ತಪ್ಪಿಸುವ ಉದ್ದೇಶದೊಂದಿಗೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಚಿಂತನೆಯನ್ನು ನಡೆಸುತ್ತಿದೆ.
ಈ ಎರಡು ಕೇಂದ್ರಾಡಳಿತ ಪ್ರದೇಶಗಳು ಪರಸ್ಪರ 35 ಕಿಲೋಮೀಟರ್ ದೂರದಲ್ಲಿದೆ ಮತ್ತು ತಮ್ಮದೇ ಸ್ವಂತ ಕಾರ್ಯಾಲಯ ಮತ್ತು ಪ್ರತ್ಯೇಕ ಬಜೆಟ್ಗಳನ್ನು ಒಳಗೊಂಡಿದೆ. ಇವುಗಳನ್ನು ವಿಲೀನಗೊಳಿಸುವುದರಿಂದ ಆಡಳಿತಾತ್ಮಕ ಖರ್ಚುವೆಚ್ಚಗಳು ಕೂಡ ಕಡಿಮೆಯಾಗುವ ನಿರೀಕ್ಷೆಯಿದೆ.
ವಿಲೀನಗೊಂಡ ಕೇಂದ್ರಾಡಳಿತ ಪ್ರದೇಶವನ್ನು ದಾದ್ರಾ ನಗರ್ ಹವೇಲಿ-ಡಾಮನ್ & ಡಿಯು ಎಂದು ಕರೆಯುವ ನಿರೀಕ್ಷೆಯಿದೆ. ಡಾಮನ್ ಮತ್ತು ದಿಯು ಈ ಕೇಂದ್ರಾಡಳಿತ ಪ್ರದೇಶದ ಕೇಂದ್ರ ಕಚೇರಿಯಾಗುವ ಸಾಧ್ಯತೆ ಇದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್ ಅನ್ನು ಇತ್ತೀಚಿಗೆ ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಿದ ಬಳಿಕ ಭಾರತದಲ್ಲಿ ಕೇಂದ್ರಾಡಳಿತ ಪ್ರದೇಶಗಳು ಸಂಖ್ಯೆ 9 ಕ್ಕೆ ಏರಿದೆ. ಡಾಮನ್ ಮತ್ತು ಡಿಯು, ದಾದ್ರಾ ಮತ್ತು ನಗರ್ ಹವೇಲಿಗಳನ್ನು ವಿಲೀನಗೊಳಿಸುವುದರಿಂದ ಈ ಸಂಖ್ಯೆ ಎಂಟಕ್ಕೆ ಇಳಿಯುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.