ನವದೆಹಲಿ: ಮುಂದಿನ ನಾಲ್ಕು ವರ್ಷಗಳೊಳಗೆ ಭಾರತೀಯ ರೈಲ್ವೆಯನ್ನು ಸಂಪೂರ್ಣ ವಿದ್ಯುದ್ಧೀಕರಣಗೊಳಿಸುವ ನಿಟ್ಟಿನಲ್ಲಿ ಕಾರ್ಯಗಳು ಮುಂದುವರಿಯುತ್ತಿದೆ ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
“ಉತ್ತಮ ಮತ್ತು ಮಾಲಿನ್ಯರಹಿತ ಭವಿಷ್ಯಕ್ಕಾಗಿ ಭಾರತೀಯ ರೈಲ್ವೆಯು ವಿದ್ಯುದೀಕರಣವನ್ನು ವೃದ್ಧಿಸುತ್ತಿದೆ. ಮುಂದಿನ ಮೂರು ನಾಲ್ಕು ವರ್ಷಗಳೊಳಗೆ ಸಂಪೂರ್ಣ ರೈಲ್ವೆಯನ್ನು ವಿದ್ಯುದ್ಧೀಕರಣಗೊಳಿಸಿ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿದೆ. ಈ ಮೂಲಕ ಭಾರತೀಯ ರೈಲ್ವೆಯು ವಿಶ್ವದ ಮೊದಲ ಇಂಗಾಲ ಹೊರಸೂಸುವಿಕೆ ಮುಕ್ತ ರೈಲ್ವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದರೊಂದಿಗೆ ರೈಲ್ವೆಯು ತನ್ನ ವಿದ್ಯುತ್ತಿನ ಬೇಡಿಕೆಯನ್ನು ಸೌರಶಕ್ತಿಗಳಿಂದ ಪೂರೈಸಲಿದೆ” ಎಂದಿದ್ದಾರೆ.
2030ರ ವೇಳೆಗೆ ಭಾರತೀಯ ರೈಲ್ವೆಯು ಶೂನ್ಯ ಇಂಗಾಲ ಹೊರಸೂಸುವಿಕೆ ರೈಲ್ವೇ ಆಗಲಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯವನ್ನು ಕೈಗೊಂಡಿದ್ದೇವೆ ಎಂದಿದ್ದಾರೆ.
ಸರಕಾರವು ಹಳೆಯ ಕಲ್ಲಿದ್ದಲು ಘಟಕಗಳನ್ನು ಸ್ಥಗಿತಗೊಳಿಸುತ್ತಿದೆ, ಇದರಿಂದ ಪರಿಸರ ಮಾಲಿನ್ಯ ತಗ್ಗಲಿದೆ ಮತ್ತು ಹೊಸ ಘಟಕಗಳಿಗೆ ಬೇಡಿಕೆ ಸೃಷ್ಟಿಯಾಗಲಿದೆ, ಇದರಿಂದ ಹೂಡಿಕೆಗೆ ಉತ್ತೇಜನ ಸಿಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.