ಲಕ್ನೋ: ಸರಕಾರಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಲು ಉತ್ತರಪ್ರದೇಶ ಬಿಜೆಪಿಯು ಡಿಸೆಂಬರ್ 1 ರಿಂದ ಜನವರಿ 30ರ ವರೆಗೆ ಗ್ರಾಮ ಸ್ವರಾಜ್ ಅಭಿಯಾನವನ್ನು ಆರಂಭಿಸುತ್ತಿದೆ. ಈ ಅಭಿಯಾನದಡಿ, ಬಿಜೆಪಿ ಕಾರ್ಯಕರ್ತರು ಗ್ರಾಮಗಳಿಗೆ ತೆರಳಿ ಯೋಜನೆಗಳ ಬಗ್ಗೆ ಜನರಿಗೆ ಅರಿವನ್ನು ಮೂಡಿಸಲಿದ್ದಾರೆ.
“ಅಭಿಯಾನದಲ್ಲಿ ನಾಯಕರು ಐದು ಅಂಶಗಳ ಅಜೆಂಡಾದೊಂದಿಗೆ ಗ್ರಾಮಗಳಿಗೆ ತೆರಳಲಿದ್ದಾರೆ. ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಲಿದ್ದಾರೆ ಮತ್ತು ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಸಭೆಯನ್ನೂ ನಡೆಸಲಿದ್ದಾರೆ. ಅಲ್ಲದೆ, ಸಮಿತಿ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಗ್ರಾಮದ ಪ್ರಭಾವಿ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದಾರೆ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಹೇಳಿದ್ದಾರೆ.
ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಈ ಅಭಿಯಾನವನ್ನು ಆಯೋಜನೆಗೊಳಿಸಲಾಗುತ್ತಿದೆ. ಅಭಿಯಾನದಡಿ 10000 ಗ್ರಾಮಗಳನ್ನು ತಲುಪುವ ಗುರಿಯನ್ನು ಬಿಜೆಪಿ ಹೊಂದಿದೆ. ಇದು ಪಕ್ಷದ ಸಂಪರ್ಕವನ್ನು ಗ್ರಾಮ ಮಟ್ಟದಿಂದಲೇ ಭದ್ರಗೊಳಿಸಲು ಸಹಕಾರಿಯಾಗಲಿದೆ.
ಓರ್ವ ಸಕ್ರಿಯ ಪಕ್ಷದ ಕಾರ್ಯಕರ್ತ ಒಂದು ಗ್ರಾಮದ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಲಿದ್ದಾರೆ.
“ಪಕ್ಷದ ಕಾರ್ಯಕರ್ತರು ವಾರಕ್ಕೆ ಒಂದು ಬಾರಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಬೂತ್ ಕಮಿಟಿ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ನಂತರ, ಸಭೆಯ ಬಗ್ಗೆ ಪಕ್ಷದ ರಾಜ್ಯ ಕೇಂದ್ರ ಕಚೇರಿಗೆ ಮಾಹಿತಿಯನ್ನು ರವಾನಿಸಲಿದ್ದಾರೆ” ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.