ನವದೆಹಲಿ: ಕೇಂದ್ರಾಡಳಿತ ಪ್ರದೇಶಗಳ ಆದ ದಿಯು ದಾಮನ್ ಮತ್ತು ದಾದ್ರ ನಗರ್ ಹವೇಲಿಗಳನ್ನು ವಿಲೀನಗೊಳಿಸುವ ಮಸೂದೆಯು ಬುಧವಾರ ಲೋಕಸಭೆಯಲ್ಲಿ ಮಂಡನೆಯಾಗಿದ್ದು. 2 ಕೇಂದ್ರಾಡಳಿತ ಪ್ರದೇಶಗಳನ್ನು ಪರಸ್ಪರ ವಿಲೀನಗೊಳಿಸುವ ಮಸೂದೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಅವರು ಉಭಯ ಕೇಂದ್ರಾಡಳಿತ ಪ್ರದೇಶಗಳನ್ನು ವಿಲೀನಗೊಳಿಸುವ ಮಸೂದೆಯನ್ನು ಸದನದಲ್ಲಿ ಪರಿಚಯಿಸಿದರು.
ಉಭಯ ಪ್ರದೇಶಗಳ ಉತ್ತಮ ನಿರ್ವಹಣೆ ಮತ್ತು ಆಡಳಿತಕ್ಕಾಗಿ ಈ ನಿರ್ಧಾರವನ್ನು ಕೇಂದ್ರ ಸರಕಾರ ತೆಗೆದುಕೊಂಡಿದೆ. ಜಮ್ಮು-ಕಾಶ್ಮೀರವನ್ನು 2 ಕೇಂದ್ರಾಡಳಿತ ಪ್ರದೇಶವಾಗಿ ವಿಭಜನೆ ಮಾಡಿದ ಬಳಿಕ ಕೇಂದ್ರ ಸರಕಾರ ಡಿಯು ಡಾಮನ್ ಮತ್ತು ದಾದ್ರ ನಗರ್ ಹವೇಲಿ ಪ್ರದೇಶಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಕೈಗೊಂಡಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.