ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಅನ್ನು ಅನುಷ್ಠಾನಗೊಳಿಸುವ ಮೂಲಕ 2024ರ ವೇಳೆಗೆ ದೇಶದಿಂದ ಸಂಪೂರ್ಣ ನುಸುಳುಕೋರರನ್ನು ಹೊರಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ
ಚೈಬಸದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಎನ್ಆರ್ಸಿಯನ್ನು ಅನುಷ್ಠಾನಗೊಳಿಸುವ ಮೂಲಕ 2024ರ ವೇಳೆಗೆ ದೇಶದಲ್ಲಿರುವ ಎಲ್ಲಾ ಅಕ್ರಮ ವಲಸಿಗರನ್ನು ಹೊರಹಾಕಲಾಗುತ್ತದೆ. ಜಾರ್ಖಂಡಿನ ಜನರು ಎಲ್ಲಾ ನುಸುಳುಕೋರರನ್ನು ಹೊರ ಕಳುಹಿಸುವ ಆಶಯವನ್ನು ಹೊಂದಿದ್ದಾರೆ. ಅದರಂತೆ ಒಬ್ಬನೇ ಒಬ್ಬ ನುಸುಳುಕೋರ ದೇಶದಲ್ಲಿ ಉಳಿಯದಂತೆ ಹೊರ ದಬ್ಬಲಾಗುತ್ತದೆ. ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ಈ ಸರ್ಕಾರ ಎನ್ಆರ್ಸಿ ಅನುಷ್ಠಾನಗೊಳಿಸಿಯೇ ಸಿದ್ಧ” ಎಂದಿದ್ದಾರೆ.
“ಜಾರ್ಖಂಡಿನ ಜನತೆಗೆ ರಾಜಕೀಯ ವಿಷಯಗಳು ಕೂಡ ಸಮಾನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಈ ರಾಜ್ಯದ ಹಲವು ಯುವಕರು ಯೋಧರಾಗಿ ದೇಶದಲ್ಲಿ ಗಡಿ ಕಾಯುತ್ತಿದ್ದಾರೆ, ಈ ಮೂಲಕ ದೇಶವನ್ನು ಸುಭದ್ರವಾಗಿ ಇಡುತ್ತಿದ್ದಾರೆ” ಎಂದರು.
“ಯುಪಿಎ ಸರ್ಕಾರದ ಹತ್ತು ವರ್ಷಗಳ ಅವಧಿಯಲ್ಲಿ ಪಾಕಿಸ್ಥಾನದ ವ್ಯಕ್ತಿಗಳು ಭಾರತಕ್ಕೆ ಬಂದು ಗುಂಡು ಹಾರಿಸಬಹುದಿತ್ತು. ಯೋಧರ ತಲೆಗಳನ್ನು ಕಡಿಯಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರದ ಅಡಿಯಲ್ಲಿ ಉರಿ ಮತ್ತು ಪುಲ್ವಾಮ ದಾಳಿಗಳಿಗೆ ಪಾಕಿಸ್ಥಾನದ ಒಳಗೆ ನುಗ್ಗಿ ಮತ್ತು ಭಯೋತ್ಪಾದಕ ಶಿಬಿರಗಳನ್ನು ಧ್ವಂಸಗೊಳಿಸಿ ಪ್ರತ್ಯುತ್ತರಗಳನ್ನು ನೀಡಲಾಗಿದೆ” ಎಂದಿದ್ದಾರೆ.
ಕಳೆದ 70 ವರ್ಷಗಳಿಂದ ಆಯೋಧ್ಯಾದ ರಾಮಮಂದಿರ ವಿಷಯವನ್ನು ಮತ್ತು ಸಂವಿಧಾನದ 370ನೇ ವಿಧಿಯನ್ನು ಶಾಶ್ವತವಾಗಿ ಸಮಸ್ಯೆಯಾಗಿ ಇಟ್ಟಿದ್ದಕ್ಕೆ ಅವರು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.