ನವದೆಹಲಿ: ಕೇಂದ್ರ ಸಚಿವ ಸಂಪುಟವು ಬುಧವಾರ ನಾಗರಿಕತ್ವ (ತಿದ್ದುಪಡಿ) ಮಸೂದೆ 2019ಕ್ಕೆ ಅನುಮೋದನೆ ನೀಡಿದೆ. ಈ ಮಸೂದೆಯು ಪಾಕಿಸ್ಥಾನ, ಅಪಘಾನಿಸ್ಥಾನ ಮತ್ತು ಬಾಂಗ್ಲಾದೇಶದಿಂದ ಬಂದ ಮುಸ್ಲಿಮೇತರ ನಿರಾಶ್ರಿತರಿಗೆ ನಾಗರಿಕತ್ವವನ್ನು ನೀಡಲು ಅನುವು ಮಾಡಿಕೊಡಲಿದೆ.
ಕೇಂದ್ರ ಪ್ರಸಾರ ಮತ್ತು ಮಾಹಿತಿ ಸಚಿವ ಪ್ರಕಾಶ್ ಜಾವಡೇಕರ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ನಾಗರಿಕತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ, ಮುಂದಿನ ವಾರ ಈ ಮಸೂದೆಯನ್ನು ಸಂಸತ್ತಿನ ಸದನಗಳ ಮುಂದೆ ಮಂಡಿಸಲಾಗುತ್ತದೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಈಶಾನ್ಯ ರಾಜ್ಯಗಳ ಹಲವಾರು ರಾಜಕಾರಣಿಗಳನ್ನು ಮತ್ತು ಹೋರಾಟಗಾರರನ್ನು ಭೇಟಿಯಾಗಿದ್ದರು. ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದರು. ಅವರೊಂದಿಗೆ ನಾಗರಿಕತ್ವ ಮಸೂದೆಯ ಬಗ್ಗೆ ಚರ್ಚೆ ನಡೆಸಿದ್ದರು.
ನಾರ್ತ್ ಈಸ್ಟ್ ಫೋರಂ ಫಾರ್ ಇಂಡಿಜೀನಿಯಸ್ ಪೀಪಲ್, ಮಣಿಪುರ ಪೀಪಲ್ ಎಗೇನ್ಸ್ಟ್ ಸಿಟಿಜನ್ ಶಿಪ್ ಅಮೆಂಡ್ಮೆಂಟ್ ಬಿಲ್ ಮುಂತಾದ ಸಂಘಟನೆಗಳ ಹೋರಾಟಗಾರರು ಮತ್ತು ಇತರ ನಾಗರಿಕರನ್ನು ಅವರು ಅಸ್ಸಾಂ ಭವನದಲ್ಲಿ ಭೇಟಿಯಾದರು.
ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ನಾಗರಿಕತ್ವ ತಿದ್ದುಪಡಿ ಮಸೂದೆಗೆ ತೀವ್ರ ಸ್ವರೂಪದಲ್ಲಿ ವಿರೋಧ ವ್ಯಕ್ತಪಡಿಸುತ್ತಿವೆ. ಸಂವಿಧಾನ ಧರ್ಮದ ಆಧಾರದಲ್ಲಿ ನಾಗರಿಕತ್ವ ನೀಡುವುದನ್ನು ಸಮ್ಮತಿಸುವುದಿಲ್ಲ ಎಂಬುದು ಅವುಗಳ ವಾದವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.