ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 1984ರ ಸಿಖ್ ವಿರೋಧಿ ದಂಗೆಯ ಆರೋಪವನ್ನು ಮಾಜಿ ಪ್ರಧಾನಿ ನರಸಿಂಹ ರಾವ್ ಅವರ ಮೇಲೆ ಹೊರಿಸಿದ್ದಾರೆ. ಈ ಮೂಲಕ ಗಾಂಧಿ ಪರಿವಾರವನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಸಿದ್ದಾರೆ.
ಮಾಜಿ ಪ್ರಧಾನಿ ಇಂಧರ್ ಕುಮಾರ್ ಗುಜರಾಲ್ ಅವರ 100 ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ ನಡೆಸಲಾದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮನಮೋಹನ್ ಸಿಂಗ್, ದೆಹಲಿಯಲ್ಲಿ 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆಯನ್ನು ಆಗಿನ ಗೃಹ ಸಚಿವ ನರಸಿಂಹ ರಾವ್ ಅವರು ಪ್ರಧಾನಿಗಳ ಮಾತನ್ನು ಅನುಸರಿಸಿದ್ದರೆ ತಪ್ಪಿಸಬಹುದಿತ್ತು ಎಂದಿದ್ದಾರೆ.
“1984ರ ಕರಾಳ ಘಟನೆ ನಡೆದಾಗ ಗುಜರಾಲ್ ಅವರು ಅಂದಿನ ಗೃಹ ಸಚಿವ ನರಸಿಂಹರಾವ್ ಅವರ ಬಳಿ ತೆರಳಿದ್ದರು. ಪರಿಸ್ಥಿತಿ ತೀರಾ ಕೆಟ್ಟದಾಗಿದೆ ಸೇನೆಯನ್ನು ಕರೆಯುವುದು ಅನಿವಾರ್ಯ ಎಂದು ಗುಜರಾಲ್ ಅವರಿಗೆ ವಿವರಿಸಿದ್ದರು. ಒಂದು ವೇಳೆ ಈ ಸಲಹೆಯನ್ನು ನರಸಿಂಹ ರಾವ್ ಅವರು ಕೇಳಿದ್ದರೆ ಕರಾಳ ಘಟನೆ ನಡೆಯುವುದನ್ನು ತಪ್ಪಿಸಬಹುದಿತ್ತು” ಎಂದು ಸಿಂಗ್ ಹೇಳಿದ್ದಾರೆ.
ಸಿಂಗ್ ಅವರ ಮಾತಿಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾದ ಖಂಡನೆಗಳು ವ್ಯಕ್ತವಾಗಿದೆ. ಗಾಂಧಿ ಪರಿವಾರವನ್ನು ರಕ್ಷಣೆ ಮಾಡುವ ಸಲುವಾಗಿ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅನೇಕ ಮಂದಿ ಆರೋಪಿಸಿದ್ದಾರೆ.
ಒಂದು ವೇಳೆ ಸಿಖ್ ವಿರೋಧಿ ದಂಗೆ ನಡೆಯಲು ನರಸಿಂಹ ರಾವ್ ಅವರೇ ಕಾರಣ ಎಂದಾಗಿದ್ದರೆ, ಮನಮೋಹನ್ ಸಿಂಗ್ ಅವರು ಯಾಕೆ ಅವರ ಸರಕಾರದಲ್ಲಿ ವಿತ್ತ ಸಚಿವರಾಗಿ ಕಾರ್ಯ ನಿರ್ವಹಿಸಿದರು ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.