ನವದೆಹಲಿ: ಟಿಬೆಟನ್ನು ಚೀನಿಯರ ಕಪಿಮುಷ್ಠಿಯಿಂದ ಸ್ವತಂತ್ರಗೊಳಿಸುವ ಸಲುವಾಗಿ ಸಂದೇಶ ಮೇಶ್ರಂ ಎಂಬುವವರು ಭಾರತದಾದ್ಯಂತ 7,500 ಕಿಲೋಮೀಟರ್ ಸೈಕಲ್ ಯಾತ್ರೆ ನಡೆಸಲು ಪ್ರಾರಂಭಿಸಿದ್ದಾರೆ.
ಈಗಾಗಲೇ ಮೇಶ್ರಂ ಅವರು ಹಿಮಾಚಲ ಪ್ರದೇಶದ ಧರ್ಮಶಾಲಾದಿಂದ ಡಿಸೆಂಬರ್ 1 ರಿಂದ ತಮ್ಮ ಸೈಕಲ್ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಗುರುವಾರ ಶಿಮ್ಲಾ ತೊರೆದು ನವದೆಹಲಿಯತ್ತ ಅವರು ತಮ್ಮ ಪ್ರಯಾಣವನ್ನು ಆರಂಭಿಸಲಿದ್ದಾರೆ. ‘ಟಿಬೆಟನ್ನು ಸ್ವತಂತ್ರಗೊಳಿಸಿ, ಭಾರತವನ್ನು ಕಾಪಾಡಿ’ ಎಂಬ ಘೋಷವಾಕ್ಯದೊಂದಿಗೆ ಅವರು ಸೈಕಲ್ ಯಾತ್ರೆಯನ್ನು ನಡೆಸುತ್ತಿದ್ದಾರೆ.
ತನ್ನ ಯಾತ್ರೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೇಶ್ರಂ, “ಕಾಲೇಜು ದಿನಗಳಲ್ಲಿ ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರ ಭಾಷಣದಿಂದ ಪ್ರೇರಿತಗೊಂಡು 1986ರಿಂದ ಟಿಬೆಟ್ ಸ್ವಾತಂತ್ರ ಹೋರಾಟಕ್ಕೆ ಬೆಂಬಲವನ್ನು ನೀಡುತ್ತಿದ್ದೇನೆ” ಎಂದಿದ್ದಾರೆ.
ಟಿಬೆಟಿಯನ್ ಸ್ವಾತಂತ್ರ್ಯ ಹೋರಾಟವು ಹಲವು ವಿಧಗಳಲ್ಲಿ ಭಾರತಕ್ಕೆ ಸಂಬಂಧಪಟ್ಟದ್ದಾಗಿದೆ ಎಂದು ಅವರು ಹೇಳಿದ್ದಾರೆ.
ಟಿಬೆಟ್ ಸ್ವಾತಂತ್ರ್ಯ ಹೋರಾಟಕ್ಕಾಗಿ ಈಗಾಗಲೇ ಇಂತಹ ಮೂರು ಸೈಕಲ್ ಯಾತ್ರೆಗಳನ್ನು ನಡೆಸಿರುವುದಾಗಿ ಅವರು ಹೇಳಿದ್ದಾರೆ.
“ಈ ಬಾರಿ ಭಾರತದ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು 7,500 ಕಿಲೋಮೀಟರ್ ಸೈಕಲ್ ಯಾತ್ರೆಯನ್ನು ನಡೆಸುತ್ತಿದ್ದೇನೆ” ಎಂದಿದ್ದಾರೆ.
2020 ರ ಮಾರ್ಚ್ 10 ರಂದು ಕರ್ನಾಟಕದ ಮುಂಡಗೋಡಿನಲ್ಲಿ ಅವರು ತಮ್ಮ ಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ. ಅಂದು ಟಿಬೆಟ್ ರಾಷ್ಟ್ರ ಉಗಮ ದಿನವೂ ಹೌದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.