ನವದೆಹಲಿ: ಸಂವಿಧಾನ ಶಿಲ್ಪಿ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರ 64 ನೇ ಮಹಾಪರಿನಿರ್ವಾಣ ದಿವಸವನ್ನು ಇಂದು ರಾಷ್ಟ್ರವ್ಯಾಪಿಯಾಗಿ ಆಚರಣೆ ಮಾಡಲಾಗುತ್ತಿದೆ. ಸಮಾನತೆಯ ಹರಿಕಾರನಿಗೆ ಸಾಮಾನ್ಯರಿಂದ ಹಿಡಿದು ಗಣ್ಯಾತಿಗಣ್ಯರು ನಮನಗಳನ್ನು ಅರ್ಪಣೆ ಮಾಡುತ್ತಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಇಂದು ಬೆಳಗ್ಗೆ ಮಾಲಾರ್ಪಣೆಯನ್ನು ನೆರವೇರಿಸಿದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಸರಣಿ ಟ್ವೀಟ್ಗಳ ಮೂಲಕ ಸಂವಿಧಾನದ ಶಿಲ್ಪಿಗೆ ವಿನಮ್ರ ಗೌರವಗಳನ್ನು, ನಮನಗಳನ್ನು ಸಲ್ಲಿಕೆ ಮಾಡಿದರು.
ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಚಾಂಪಿಯನ್ ಅಪ್ರತಿಮ ದೇಶಭಕ್ತ, ರಾಷ್ಟ್ರವಾದಿ, ಬಡವರ ಸಬಲೀಕರಣಕ್ಕಾಗಿ, ಹಿಂದುಳಿದವರ ಅಭಿವೃದ್ಧಿಗಾಗಿ ಶ್ರಮಿಸಿದವರು ಎಂದಿದ್ದಾರೆ.
ಅಂಬೇಡ್ಕರ್ ಅವರು ಘನತೆ, ಏಕತೆ ಮತ್ತು ಎಲ್ಲಾ ನಾಗರಿಕರ ಸ್ವಾತಂತ್ರ್ಯವನ್ನು ಬಲವಾಗಿ ಪ್ರತಿಪಾದಿಸಿದರು. ಭಾರತದ ಸಂವಿಧಾನವನ್ನು ರಚನೆ ಮಾಡಿದರು ಮತ್ತು ಹಿಂದುಳಿದವರ ಹಕ್ಕುಗಳಿಗಾಗಿ ಹೋರಾಡಿದರು ಎಂದಿದ್ದಾರೆ.
ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಅನುಸರಿಸಿದಾಗ ಮಾತ್ರ ಅವರಿಗೆ ನಿಜವಾದ ಗೌರವವನ್ನು ನಾವು ಸಲ್ಲಿಸಿದಂತಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.