ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಆದರೆ ಇದೀಗ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಸೈದರಾಬಾದ್ ಪೊಲೀಸರು ಪ್ರಕರಣದ 4 ಆರೋಪಿಗಳನ್ನು ಎನ್ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಯಿಂದ ಇಡೀ ದೇಶವೇ ಸಂತೋಷಗೊಂಡಿದೆ. ಪೊಲೀಸರ ಕಾರ್ಯಕ್ಕೆ ಎಲ್ಲಾ ಕಡೆಯಿಂದಲೂ ಶ್ಲಾಘನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಅದರಲ್ಲೂ ತೆಲಂಗಾಣದಲ್ಲಿ ಮಹಿಳೆಯರ ಮತ್ತು ಇತರ ನಾಗರಿಕರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಪರಸ್ಪರ ಸಿಹಿತಿಂಡಿಯನ್ನು ಹಂಚಿ ಪೊಲೀಸರ ಕಾರ್ಯವನ್ನು ಸಂಭ್ರಮಿಸುತ್ತಿದ್ದಾರೆ. ಪೊಲೀಸರಿಗೆ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಪೊಲೀಸರಿಗೆ ಮಹಿಳೆಯರು ರಾಖಿ ಕಟ್ಟಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತಿದ್ದಾರೆ. ಮೃತ ಪ್ರಿಯಾಂಕಾ ರೆಡ್ಡಿ ಪರವಾದ ಘೋಷಣೆಗಳನ್ನು, ಅತ್ಯಾಚಾರಿಗಳ ವಿರುದ್ಧವಾದ ಘೋಷಣೆಗಳನ್ನು, ಪೊಲೀಸರ ಕಾರ್ಯಕ್ಕೆ ಬೆಂಬಲ ನೀಡುವ ಘೋಷಣೆಗಳನ್ನು ಕೂಗಲಾಗುತ್ತಿದೆ.
“ಪೊಲೀಸರಿಗೂ ಹೆಣ್ಣುಮಕ್ಕಳಿದ್ದಾರೆ. ಅವರ ಮನಸ್ಸಿನೊಳಗೆ ಕೋಪ ಕುದಿಯುತ್ತಿರುತ್ತದೆ. ಅವರು ನಿಜಕ್ಕೂ ಒಂದು ಒಳ್ಳೆಯ ಹೆಜ್ಜೆಯನ್ನು ಮುಂದಿಟ್ಟಿದ್ದಾರೆ ಎಂಬುದಕ್ಕೆ ನನಗೆ ಸಂತೋಷವಾಗುತ್ತಿದೆ. ನಾವು ಅವರಿಗೆ ರಾಖಿ ಕಟ್ಟಿ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದೇವೆ. ಅವರು ನಮಗೋಸ್ಕರ ಇರುವವರು ಎಂಬುದನ್ನು ಇಂದು ಸಾಬೀತುಪಡಿಸಿದ್ದಾರೆ” ಎಂದಿದ್ದಾರೆ.
ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರನ್ನು ಹತ್ಯೆ ಮಾಡಲಾದ ಸ್ಥಳದಲ್ಲೇ ಆರೋಪಿಗಳನ್ನು ಪೊಲೀಸರು ಕೊಂದುಹಾಕಿದ್ದಾರೆ. ಈ ವೇಳೆ ಸ್ಥಳೀಯ ಜನರು ಅಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹೂಗಳನ್ನು ಹಾರಿಸಿ ಸಂತೋಷವನ್ನು ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.