ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಲ್ಲಿಕೆ ಪ್ರಕ್ರಿಯೆಗಳನ್ನು ಸರಳಗೊಳಿಸುವ ಸಲುವಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜನರಿಂದ ಸಲಹೆ ಸೂಚನೆಗಳನ್ನು ಆಹ್ವಾನಿಸಿದ್ದಾರೆ.
ಟ್ವೀಟ್ ಮಾಡಿರುವ ಸೀತಾರಾಮನ್ ಅವರು, “ಸಲ್ಲಿಕೆ ಪ್ರಕ್ರಿಯೆಗಳನ್ನು ಸುಲಲಿತಗೊಳಿಸಲು ಮತ್ತು ಸರಳಗೊಳಿಸಲು ಸಲಹೆ ಸೂಚನೆಗಳನ್ನು ಪಡೆಯಲು ಜಿಎಸ್ಟಿ ಕಛೇರಿಗಳು ಸಿದ್ಧವಾಗಿವೆ. ಆಸಕ್ತರನ್ನು ಹತ್ತಿರದ ಕಚೇರಿಗಳಿಗೆ ಆಹ್ವಾನಿಸುತ್ತೇವೆ” ಎಂದಿದ್ದಾರೆ.
ಹೊಸ ಜಿಎಸ್ಟಿ ರಿಟರ್ನ್ಸ್ ಅನ್ನು 2020ರ ಏಪ್ರಿಲ್ 1 ರಂದು ಪರಿಚಯಿಸಲಾಗುತ್ತಿದೆ. ಸೆಂಟ್ರಲ್ ಜಿಎಸ್ಟಿ ಮತ್ತು ಸ್ಟೇಟ್ ಜಿಎಸ್ಟಿ ಆಡಳಿತಗಳು ದೇಶವ್ಯಾಪಿಯಾಗಿ ಹೊಸ ಜಿಎಸ್ಟಿ ರಿಟರ್ನ್ಸ್ ಬಗ್ಗೆ ಜಿಎಸ್ಟಿ ಸ್ಟೇಕ್ ಹೋಲ್ಡರ್ ಗಳಿಂದ ಪ್ರತಿಕ್ರಿಯೆಗಳನ್ನು ಆನ್ ದಿ ಸ್ಪಾಟ್ ಆಗಿ ಪಡೆಯುತ್ತಿದೆ. ಜಿಎಸ್ಟಿ ಸಲ್ಲಿಕೆ ವಿಷಯದಲ್ಲಿ ಯಾವುದೇ ತೊಂದರೆಗಳು ಉಂಟಾಗಬಾರದು, ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳ ಮತ್ತು ಸುಲಭವಾಗಿರಬೇಕು ಎಂಬ ಉದ್ದೇಶದಿಂದ ಹೊಸ ರಿಟರ್ನ್ಸ್ ಅನ್ನು ತರಲಾಗುತ್ತಿದೆ.
ಪ್ರತಿಷ್ಠಿತ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು, ತೆರಿಗೆದಾರರನ್ನು ಮತ್ತು ತೆರಿಗೆ ವ್ಯವಸ್ಥೆಗೆ ಸಂಬಂಧಿಸಿದ ವ್ಯಕ್ತಿಗಳು ಸಲಹೆ ಸೂಚನೆಗಳನ್ನು ನೀಡುವ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ವಿತ್ತ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ನವೆಂಬರ್ ತಿಂಗಳ ಜಿಎಸ್ಟಿ ಸಂಗ್ರಹವು 1 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.