ಲಂಡನ್: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ತಮ್ಮ ಸಂಗಾತಿ ಕ್ಯಾರಿ ಸೈಮಂಡ್ಸ್ ಅವರೊಂದಿಗೆ ಲಂಡನ್ನಲ್ಲಿರುವ ಅತಿ ಪ್ರಸಿದ್ಧ ಹಿಂದೂ ದೇಗುಲಕ್ಕೆ ಭೇಟಿ ನೀಡಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ನವಭಾರತವನ್ನು ನಿರ್ಮಿಸುವ ಮಹತ್ವಾಕಾಂಕ್ಷೆಗೆ ಕೈಜೋಡಿಸುವುದಾಗಿ ಭರವಸೆಯನ್ನು ನೀಡಿದ್ದಾರೆ.
ಇಂಗ್ಲೆಂಡಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅವರು ಹಿಂದೂ ಸಮುದಾಯದ ಬಳಿ ಮತಯಾಚನೆ ಮಾಡುವ ಸಲುವಾಗಿ ಯುಕೆಯ ಅತ್ಯಂತ ಪ್ರಸಿದ್ಧ ಸ್ವಾಮಿನಾರಾಯಣ ಮಂದಿರಕ್ಕೆ ಭೇಟಿಯನ್ನು ನೀಡಿದರು.
ಈ ವೇಳೆ ಬೋರಿಸ್ ಅವರು, ನವ ಭಾರತದ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈ ಜೋಡಿಸುವ ಭರವಸೆಯನ್ನು ಹಿಂದೂ ಸಮುದಾಯಕ್ಕೆ ನೀಡಿದರು.
“ಪ್ರಧಾನಿ ನರೇಂದ್ರ ಮೋದಿಯವರು ನವಭಾರತವನ್ನು ನಿರ್ಮಾಣ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ ಎಂಬುದು ನನಗೆ ತಿಳಿದಿದೆ. ಯುಕೆ ಸರಕಾರದಲ್ಲಿರುವ ನಾವು ಅವರ ಕಾರ್ಯಕ್ಕೆ ಸಂಪೂರ್ಣವಾದ ಬೆಂಬಲವನ್ನು ನೀಡುತ್ತೇವೆ’ ಎಂದಿದ್ದಾರೆ.
ಯುಕೆಯಲ್ಲಿ ಬೋರಿಸ್ ಜಾನ್ಸನ್ ನೇತೃತ್ವದ ಕನ್ಸರ್ವೇಟಿವ್ ಪಕ್ಷ ಚುನಾವಣಾಪೂರ್ವ ಸಮೀಕ್ಷೆಗಳಲ್ಲಿ ಮುನ್ನಡೆಯಲ್ಲಿದೆ. ವಿರೋಧಪಕ್ಷದ ಲೇಬರ್ ಪಾರ್ಟಿ ಹಿನ್ನಡೆಯನ್ನು ಕಾಣುವ ನಿರೀಕ್ಷೆಯಿದೆ.
ಕಾಶ್ಮೀರ ವಿಷಯದಲ್ಲಿ ಲೇಬರ್ ಪಕ್ಷವು ಹೊಂದಿರುವ ಭಾರತ ವಿರೋಧಿ ನಿಲುವನ್ನು ಉಲ್ಲೇಖ ಮಾಡಿರುವ ಬೋರಿಸ್ ಅವರು, “ನಮ್ಮ ದೇಶದಲ್ಲಿ ಜನಾಂಗೀಯ ನಿಂದನೆ ಮತ್ತು ಭಾರತವಿರೋಧಿ ನಿಲುವುಗಳಿಗೆ ಯಾವುದೇ ಸ್ಥಾನವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
“ಯುಕೆ ಯಲ್ಲಿರುವ ಭಾರತೀಯರು ಹಿಂದೆ ಕನ್ಸರ್ವೇಟಿವ್ ಪಕ್ಷವು ಅಧಿಕಾರಕ್ಕೆ ಬರಲು ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಈ ಬಗ್ಗೆ ನಾನು ನರೇಂದ್ರ ಮೋದಿ ಅವರ ಬಳಿ ಹೇಳಿಕೊಂಡಾಗ, ಅವರು ನಕ್ಕು ಭಾರತೀಯರು ಯಾವಾಗಲೂ ಗೆಲುವಿನ ಪರವಾಗಿ ಇರುತ್ತಾರೆ ಎಂದರು” ಎಂದು ಬೋರಿಸ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.