ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಶೀಘ್ರದಲ್ಲೇ ಅವರನ್ನು ನೇಣುಗಂಬಕ್ಕೆ ಏರಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.
ಮಂಡೋಲಿ ಜೈಲಿನಲ್ಲಿದ್ದ ಅಪರಾಧಿಗಳಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತನನ್ನು ಇದೀಗ ತಿಹಾರಿನ ಜೈಲ್ ನಂ.2ಗೆ ಸ್ಥಳಾಂತರ ಮಾಡಲಾಗಿದೆ. ಈ ಪ್ರಕರಣದ ಇತರ ಮೂವರು ಅಪರಾಧಿಗಳೆಂದರೆ, ಮುಕೇಶ್ ಸಿಂಗ್, ವಿನಯ್ ಶರ್ಮಾ ಮತ್ತು ಅಕ್ಷಯ್. ಇವರುಗಳು ಈಗಾಗಲೇ ತಿಹಾರ್ ಜೈಲಿನಲ್ಲಿ ಇದ್ದಾರೆ.
ಗಲ್ಲು ಶಿಕ್ಷೆಯನ್ನು ರದ್ದು ಪಡಿಸುವಂತೆ ಕೋರಿ ವಿನಯ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದ. ಆದರೆ ಈ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದಾರೆ. ನಿಯಮಗಳ ಪ್ರಕಾರ, ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ 14 ದಿನಗಳೊಳಗೆ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕಾಗುತ್ತದೆ. ಇದೇ ವೇಳೆ ಪೊಲೀಸರು ಅಪರಾಧಿಗಳ ಡೆತ್ ವಾರಂಟ್ ಅನ್ನು ಸ್ವೀಕರಿಸುತ್ತಾರೆ.
ನಿರ್ಭಯ ಪ್ರಕರಣದಲ್ಲಿ ವಿನಯ್ ಎಂಬಾತನನ್ನು ಹೊರತುಪಡಿಸಿ ಬೇರೆ ಯಾವ ಅಪರಾಧಿಗಳು ಕೂಡ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿರಲಿಲ್ಲ. ಇದೀಗ ಎಲ್ಲಾ ನಾಲ್ವರು ಅಪರಾಧಿಗಳಿಗೆ ಕೂಡ ಒಂದೇ ದಿನ ಗಲ್ಲು ಶಿಕ್ಷೆಯನ್ನು ವಿಧಿಸುವ ಸಾಧ್ಯತೆಯಿದೆ.
2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ರಾತ್ರಿ ವೇಳೆ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವು ದೇಶವ್ಯಾಪಿಯಾಗಿ ಭಾರಿ ಹೋರಾಟಕ್ಕೆ ನಾಂದಿ ಹಾಡಿತ್ತು. ಅತ್ಯಾಚಾರಕ್ಕೆ ಒಳಗಾಗಿದ್ದ ನಿರ್ಭಯ ಕೆಲವು ದಿನಗಳ ಜೀವನ್ಮರಣ ಹೋರಾಟದ ಬಳಿಕ ಇಹಲೋಕವನ್ನು ತ್ಯಜಿಸಿದ್ದಳು. ಈ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳಲ್ಲಿ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿತ್ತು. ಅಪರಾಧಿಗಳಲ್ಲಿ ಒಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾನೆ. ಇನ್ನೊಬ್ಬನನ್ನು ಅಪ್ರಾಪ್ತ ಎನ್ನುವ ಕಾರಣಕ್ಕೆ ಖುಲಾಸೆಗೊಳಿಸಲಾಗಿದೆ. ಇದೀಗ ಉಳಿದ ನಾಲ್ವರಿಗಾಗಿ ನೇಣುಗಂಬ ಸಿದ್ಧಗೊಳ್ಳುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.