ನವದೆಹಲಿ: ಮಹಿಳಾ ವಿರುದ್ಧದ ದೌರ್ಜನ್ಯಗಳನ್ನು ತಡೆಗಟ್ಟುವ ವಿಶ್ವಸಂಸ್ಥೆಯ ಅಭಿಯಾನದ ಭಾಗವಾಗಿ, ಜಾಗತಿಕ ಮಟ್ಟದಲ್ಲಿ ಮಹಿಳಾ ದೌರ್ಜನ್ಯದ ವಿರುದ್ಧ ಜಾಗೃತಿಯನ್ನು ಮೂಡಿಸುವ ಸಲುವಾಗಿ ಮಂಗಳವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಕೇಸರಿ ದೀಪಗಳನ್ನು ಬೆಳಗಿಸಲಾಯಿತು.
“ವಿಶ್ವದಾದ್ಯಂತ ಮಹಿಳೆಯರು ಎದುರಿಸುತ್ತಿರುವ ದೌರ್ಜನ್ಯಗಳ ವಿರುದ್ಧ ಜಾಗೃತಿಯನ್ನು ಮೂಡಿಸುವ ಸಲುವಾಗಿ ರಾಷ್ಟ್ರಪತಿ ಭವನದಲ್ಲಿ ಕೇಸರಿ ದೀಪಗಳನ್ನು ಬೆಳಗಿಸಲಾಯಿತು. ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ವಿಶ್ವಸಂಸ್ಥೆಯ ಅಭಿಯಾನದ ಭಾಗವಾಗಿ ಕೇಸರಿ ದೀಪಗಳನ್ನು ಬೆಳಗಿಸಲಾಗಿದೆ. ಈ ಬಾರಿ ” Orange The World: Generation Equality Stands Against Rape” ಎಂಬುದಾಗಿದೆ” ಎಂದು ರಾಷ್ಟ್ರಪತಿಭವನದ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಆಯೋಜನೆಗೊಳಿಸಿದ ಮಾನವ ಹಕ್ಕುಗಳ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ದೇಶದ ಹಲವು ಭಾಗಗಳಲ್ಲಿ ಮಹಿಳೆಯರ ವಿರುದ್ಧ ಅಮಾನುಷ ಅಪರಾಧಗಳು ನಡೆಯುತ್ತಿರುವ ಬಗ್ಗೆ ವರದಿಗಳಾಗುತ್ತಿವೆ, ಇಂತಹ ಘಟನೆಗಳು ಸಮಾಜದ ಒಂದು ಭಾಗ ಅಥವಾ ಒಂದು ದೇಶಕ್ಕೆ ಸೀಮಿತವಾಗಿಲ್ಲ” ಎಂದಿದ್ದಾರೆ.
ಹೋರಾಟಗಾರ್ತಿ ಹಂಸಬೆನ್ ಮೆಹ್ತಾ ಅವರು ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದ ರಾಷ್ಟ್ರಪತಿಗಳು, “”ಮಹಿಳೆಯ ಸಮಾನ ಹಕ್ಕುಗಳು ಮತ್ತು ಸಮಾನ ಘನತೆಯ ದೃಷ್ಟಿಗೆ ಅನುಗುಣವಾಗಿ ನಾವು ಒಂದು ಸಮಾಜವಾಗಿ ಬದುಕಿದ್ದೇವೆಯೇ ಎಂಬ ಪ್ರಶ್ನೆಯನ್ನು ನಮಗೆ ನಾವೇ ಕೇಳಿಕೊಳ್ಳಬೇಕು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.