ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ನೆಲೆಸಿರುವ ಪಾಕಿಸ್ಥಾನದಿಂದ ಬಂದ ಹಿಂದೂ ನಿರಾಶ್ರಿತರು ಮತ್ತು ಅಫ್ಘಾನ್ ಸಿಖ್ ಕುಟುಂಬಗಳು ಸಂಭ್ರಮಾಚರಿಸುತ್ತಿವೆ.
ಲೋಕಸಭೆಯಲ್ಲಿ ಮಸೂದೆ ಅಂಗೀಕಾರಗೊಳ್ಳುತ್ತಿದ್ದಂತೆ ವಿವಿಧ ಭಾಗಗಳಲ್ಲಿ ನೆಲೆಸಿದ್ದ ನಿರಾಶ್ರಿತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಮಸೂದೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕ್ ನಿರಾಶ್ರಿತ ತಲಿಬ್ ಕುಮಾರ್ ಅವರು, “ನಾನು ಇಲ್ಲಿಗೆ ಬಂದಾಗ ನನಗೆ ಕೇವಲ 9 ವರ್ಷ. ಪಾಕಿಸ್ಥಾನದಲ್ಲಿ ಭವಿಷ್ಯ ಇಲ್ಲ ಎಂಬುದನ್ನು ಅರಿತು ನಾವು ಇಲ್ಲಿಗೆ ಬಂದೆವು. ನಮ್ಮನ್ನು ಇಸ್ಲಾಂಗೆ ಮತಾಂತರ ಆಗುವಂತೆ ಬಲವಂತ ಮಾಡಲಾಗುತ್ತಿತ್ತು. ನಮ್ಮ ಸಹೋದರ, ಸಹೋದರಿಯರನ್ನು ಮನೆಯಿಂದ ಅಪಹರಣ ಮಾಡಲಾಗುತ್ತಿತ್ತು, ಗನ್ ತೋರಿಸಿ ಮತಾಂತರ ಮಾಡಲಾಗುತ್ತಿತ್ತು” ಎಂದಿದ್ದಾರೆ.
ನಮ್ಮಂತೆ ಅನೇಕರು ಪಾಕಿಸ್ಥಾನದಲ್ಲಿ ಇಂದಿಗೂ ಕಿರುಕುಳ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.
ಪಾಕಿಸ್ಥಾನದಲ್ಲಿರುವ ಹಿಂದೂ ಕುಟುಂಬಗಳಿಗೆ ವೀಸಾಗಳನ್ನು ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಬಳಿ ನಾನು ಮನವಿ ಮಾಡಿಕೊಂಡಿದ್ದೇನೆ. ಇದರಿಂದ ಅವರು ತಮ್ಮ ಸಹೋದರ ಮತ್ತು ಸಹೋದರಿಯರನ್ನು ರಕ್ಷಣೆ ಮಾಡಲು ಸಾಧ್ಯ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.